Featured

ಮಂಗಳೂರು : ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಚರ್ಮಗಂಟು ರೋಗ –  ನೂರಾರು ಜಾನುವಾರುಗಳು ಸಾವು – Vishwanews24

ಮಂಗಳೂರು : ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಚರ್ಮಗಂಟು ರೋಗ –  ನೂರಾರು ಜಾನುವಾರುಗಳು ಸಾವು

ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ ಎಂಬ ಆತಂಕ, ಹೈನುಗಾರಿಕೆ ಕೃಷಿಕರು ಕಂಗಾಲು..

ಚರ್ಮಗಂಟು ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ..

ಜನವರಿ 15 ರ ವೇಳೆಗೆ ಎಲ್ಲಾ ಜಾನುವಾರುಗಳಿಗೆ ಲಸಿಕೆ  : ಪ್ರಭು ಚೌಹ್ವಾಣ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನುವಾರುಗಳ ಚರ್ಮ‌ಗಂಟು ರೋಗ ದಿನೇ ದಿನೇ ಉಲ್ಬಣಗೊಂಡಿದ್ದು, ಹೈನುಗಾರಿಕೆ ಕೃಷಿಕರು ಕಂಗಾಲಾಗಿದ್ದಾರೆ. ಅಪಾಯಕಾರಿ ಚರ್ಮ ಗಂಟು ರೋಗದ ಬಾಧೆಯಿಂದ ನೂರಾರು ಜಾನುವಾರುಗಳು ಸಾವನಪ್ಪಿದ್ದು, ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ ಎಂಬ ಆತಂಕ ಕೃಷಿಕರದ್ದು ಹಾಗೂ ಪಶುಸಂಗೋಪನೆ ಇಲಾಖೆಯದ್ದು.

ಕಳೆದ ಕೆಲ ಸಮಯದಿಂದ ಜಾನುವಾರುಗಳಲ್ಲಿ ಮಾರಣಾಂತಿಕ ಕಾಯಿಲೆ ಕಾಣಿಸಿಕೊಂಡಿದ್ದು, ಸಾವಿರಾರು ರೂಪಾಯಿಗಳ ನಷ್ಟವನ್ನು ಕೃಷಿಕರು ಅನುಭವಿಸಿದ್ದಾರೆ. ಇಲಾಖೆ ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಮನೆಮನೆಗೆ ತೆರಳಿ ಇಂಜೆಕ್ಷನ್‌ ನೀಡುವ ಕೆಲಸ ಪ್ರಾಥಮಿಕ ಹಂತದಲ್ಲಿ ಮಾಡಿದೆ, ಈ ಬಗ್ಗೆ ಜಾಗೃತಿ ಕಾರ್ಯಕ್ರಮ ಗಳನ್ನು ಹಮ್ಮಿಕೊಂಡು ಶಿಬಿರಗಳನ್ನು ನಡೆಸಿದೆ.

ಆದರೆ ಲಸಿಕೆ ನೀಡಿದ ಬಳಿಕವೂ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಹಲವು ಜಾನುವಾರುಗಳು ಸಾವನ್ನಪ್ಪಿವೆ.

ಚರ್ಮಗಂಟು ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ.. ಜನವರಿ 15 ರ ವೇಳೆಗೆ ಎಲ್ಲಾ ಜಾನುವಾರುಗಳಿಗೆ ಲಸಿಕೆ  : ಪ್ರಭು ಚೌಹ್ವಾಣ್

ರಾಜ್ಯದಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಜನವರಿ 15 ರ ವೇಳೆಗೆ ಎಲ್ಲಾ ಜಾನುವಾರುಗಳಿಗೆ ಲಸಿಕೆ ನೀಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹ್ವಾಣ್ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಚರ್ಮಗಂಟು ರೋಗ ನಿಯಂತ್ರಿಸುವ ಸಲುವಾಗಿ ಈಗಾಗಲೇ 92 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಮುಂದಿನ ವರ್ಷದ ಜನವರಿ 15 ರ ವೇಳೆಗೆ ಎಲ್ಲಾ ರಾಸುಗಳಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.

ರಾಸುಗಳಿಗೆ ಚರ್ಮಗಂಟು ರೋಗ 22 ರಾಜ್ಯಗಳಲ್ಲಿ ಬಂದಿದೆ. ರಾಜಸ್ಥಾನದಲ್ಲಿ 75 ಸಾವಿರ ಸಾವು ಸಂಭವಿಸಿದ್ದು, ರಾಜ್ಯದಲ್ಲಿ ಈವರೆಗೆ 22 ಸಾವಿರ ರಾಸುಗಳಿಗೆ ಮಾತ್ರ ಸಾವನ್ನಪ್ಪಿವೆ ಎಂದು ಮಾಹಿತಿ ನೀಡಿದ್ದಾರೆ.

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

15 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

15 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

15 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

18 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

18 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

18 hours ago