ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನುವಾರುಗಳ ಚರ್ಮಗಂಟು ರೋಗ ದಿನೇ ದಿನೇ ಉಲ್ಬಣಗೊಂಡಿದ್ದು, ಹೈನುಗಾರಿಕೆ ಕೃಷಿಕರು ಕಂಗಾಲಾಗಿದ್ದಾರೆ. ಅಪಾಯಕಾರಿ ಚರ್ಮ ಗಂಟು ರೋಗದ ಬಾಧೆಯಿಂದ ನೂರಾರು ಜಾನುವಾರುಗಳು ಸಾವನಪ್ಪಿದ್ದು, ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ ಎಂಬ ಆತಂಕ ಕೃಷಿಕರದ್ದು ಹಾಗೂ ಪಶುಸಂಗೋಪನೆ ಇಲಾಖೆಯದ್ದು.
ಕಳೆದ ಕೆಲ ಸಮಯದಿಂದ ಜಾನುವಾರುಗಳಲ್ಲಿ ಮಾರಣಾಂತಿಕ ಕಾಯಿಲೆ ಕಾಣಿಸಿಕೊಂಡಿದ್ದು, ಸಾವಿರಾರು ರೂಪಾಯಿಗಳ ನಷ್ಟವನ್ನು ಕೃಷಿಕರು ಅನುಭವಿಸಿದ್ದಾರೆ. ಇಲಾಖೆ ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಮನೆಮನೆಗೆ ತೆರಳಿ ಇಂಜೆಕ್ಷನ್ ನೀಡುವ ಕೆಲಸ ಪ್ರಾಥಮಿಕ ಹಂತದಲ್ಲಿ ಮಾಡಿದೆ, ಈ ಬಗ್ಗೆ ಜಾಗೃತಿ ಕಾರ್ಯಕ್ರಮ ಗಳನ್ನು ಹಮ್ಮಿಕೊಂಡು ಶಿಬಿರಗಳನ್ನು ನಡೆಸಿದೆ.
ಆದರೆ ಲಸಿಕೆ ನೀಡಿದ ಬಳಿಕವೂ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಹಲವು ಜಾನುವಾರುಗಳು ಸಾವನ್ನಪ್ಪಿವೆ.
ರಾಜ್ಯದಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಜನವರಿ 15 ರ ವೇಳೆಗೆ ಎಲ್ಲಾ ಜಾನುವಾರುಗಳಿಗೆ ಲಸಿಕೆ ನೀಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹ್ವಾಣ್ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಚರ್ಮಗಂಟು ರೋಗ ನಿಯಂತ್ರಿಸುವ ಸಲುವಾಗಿ ಈಗಾಗಲೇ 92 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಮುಂದಿನ ವರ್ಷದ ಜನವರಿ 15 ರ ವೇಳೆಗೆ ಎಲ್ಲಾ ರಾಸುಗಳಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.
ರಾಸುಗಳಿಗೆ ಚರ್ಮಗಂಟು ರೋಗ 22 ರಾಜ್ಯಗಳಲ್ಲಿ ಬಂದಿದೆ. ರಾಜಸ್ಥಾನದಲ್ಲಿ 75 ಸಾವಿರ ಸಾವು ಸಂಭವಿಸಿದ್ದು, ರಾಜ್ಯದಲ್ಲಿ ಈವರೆಗೆ 22 ಸಾವಿರ ರಾಸುಗಳಿಗೆ ಮಾತ್ರ ಸಾವನ್ನಪ್ಪಿವೆ ಎಂದು ಮಾಹಿತಿ ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…