ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಗುರುವಾರ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಂಗಳೂರು ನಗರದಲ್ಲಿ ಬಹುತೇಕ ಕಡೆ ರಸ್ತೆಗಳಲ್ಲೆಲ್ಲಾ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ನಗರದಾದ್ಯಂತ ಸಂಚಾರ ದಟ್ಟಣೆ ಉಂಟಾಗಿದೆ.
ಮಂಗಳೂರು ನಗರದ ಪಡೀಲು, ಪಂಪ್ ವೆಲ್, ಬೆಜೈ, ಅತ್ತಾವರ, ನೀರುಮಾರ್ಗಗಳಲ್ಲೆಲ್ಲಾ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ಹೊರಗೆ ವ್ಯವಹಾರಕ್ಕೆ, ಕಚೇರಿಗೆಂದು ವಾಹನಗಳಲ್ಲಿ ಹೋದವರಿಗೆ ಅಲ್ಲಲ್ಲಿ ನೀರು ತುಂಬಿಕೊಂಡು ಚಲಿಸಲಾಗದೆ ಸಿಕ್ಕಿಹಾಕಿಕೊಂಡಿದ್ದಾರೆ. ತಗ್ಗು ಪ್ರದೇಶದ ಮನೆಗಳು, ಕಟ್ಟಡಗಳಿಗೆ ನೀರು ನುಗ್ಗಿವೆ.ಕೊಟ್ಟಾರ ಚೌಕಿ ಬಳಿ ರಾಜಕಾಲುವೆ ತುಂಬಿ ಹರಿದಿದೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮರವೂರು ಸೇತುವೆ ಹತ್ತಿರದ ರಸ್ತೆಗಳು ಧಾರಾಕಾರ ಮಳೆಗೆ ಹಾನಿಗೀಡಾಗಿದ್ದು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…