Featured

ಮಂಗಳೂರು : ಜಿಲ್ಲೆಯ ಕಾಲೇಜುಗಳಿಗೆ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 15 ರವರೆಗೆ ದಸರಾ ರಜೆ -Vishwanews24

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೊಳಪಟ್ಟಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ, ಸ್ವಾಯತ್ತ, ಘಟಕ ಪದವಿ ಮಟ್ಟದ ಕಾಲೇಜುಗಳಿಗೆ ಇದೇ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 15 ರವರೆಗೆ ದಸರಾ ರಜೆ ನೀಡುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಶಾಸಕ ಕಾಮತ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 30 ರಿಂದಲೇ ನವರಾತ್ರಿಯ ಧಾರ್ಮಿಕ ವಿದಿವಿಧಾನಗಳನ್ನು ಆರಂಭವಾಗುತ್ತವೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರಸಿದ್ಧ ದೇವಾಲಯಗಳಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯುತ್ತವೆ.

ಆದ್ದರಿಂದ ಸೆಪ್ಟೆಂಬರ್ 30 ರಿಂದ ರಜೆಗಳು ಆರಂಭವಾದ್ದಲ್ಲಿ ಕಾಲೇಜುಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿನಿಯರಿಗೆ, ಶಿಕ್ಷಕರಿಗೆ, ಶಿಕ್ಷಕೇತರರಿಗೆ ದೇವಿ ದೇವಸ್ಥಾನಗಳಲ್ಲಿ ನಡೆಯುವ ವಿಶೇಷ ಪೂಜೆ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದಾಗಿದೆ. ಅದಕ್ಕಾಗಿ ರಜೆಯನ್ನು ಸೆಪ್ಟೆಂಬರ್ 30 ರಿಂದಲೇ ಮಂಜೂರು ಮಾಡಬೇಕು ಎಂದು ತಾವು ಉನ್ನತ ಶಿಕ್ಷಣ ಮತ್ತು ಉಪಮುಖ್ಯಮಂತ್ರಿಯೂ ಆಗಿರುವ ಅಶ್ವಥ್ ನಾರಾಯಣ್ ಅವರಿಗೆ ಮನವಿ ಮಾಡಿದ್ದೆ.

ನನ್ನ ಮನವಿಯನ್ನು ಪುರಸ್ಕರಿಸಿ ಆಶ್ವಥ್ ನಾರಾಯಣ್ ಅವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸುತ್ತೋಲೆ ನೀಡಿದ್ದಾರೆ. ಅದನ್ನು ಆದರಿಸಿ ಕುಲಸಚಿವರು ರಜೆ ನೀಡಲು ಸೂಚಿಸಿದ್ದಾರೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. ಈಗಾಗಲೇ ಶಾಸಕ ಕಾಮತ್ ಅವರ ಮನವಿಯ ಮೇರೆಗೆ ಪ್ರಾರ್ಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾಗಿರುವ ಸುರೇಶ್ ಕುಮಾರ್ ಅವರು ದಸರಾ ರಜೆಯನ್ನು ಮಂಜೂರು ಮಾಡಿದ್ದನ್ನು ಸ್ಮರಿಸಬಹುದು. ತಮ್ಮ ಮನವಿಯನ್ನು ಪುರಸ್ಕರಿಸಿದ ರಾಜ್ಯ ಸರಕಾರಕ್ಕೆ ಧನ್ಯವಾದವನ್ನು ಶಾಸಕ ಕಾಮತ್ ಸಲ್ಲಿಸಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

13 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

13 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

14 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

14 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

15 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

15 hours ago