ಮಂಗಳೂರು,: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.
ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್ ಗ್ಲಾಸ್ ಧರಿಸಿಕೊಂಡಿರುವ ಶಂಕಿತ ಆರೋಪಿಯ ಸಿಸಿ ಕೆಮರಾದಲ್ಲಿ ಸೆರೆ ಸಿಕ್ಕ ಪೋಟೋ ಬಿಡುಗಡೆಗೊಳಿಸಿದ್ದಾರೆ.
ಈ ವ್ಯಕ್ತಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಅದನ್ನು ಪೊಲೀಸರಿಗೆ ನೀಡುವಂತೆ ಕೋರಲಾಗಿದ್ದು ಮಾಹಿತಿದಾರರ ಗೌಪ್ಯತೆ ಕಾಪಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಜುವೆಲ್ಯರಿಯೊಂದಕ್ಕೆ ಹಾಡುಹಗಲೇ ನುಗ್ಗಿದ್ದ ದುಷ್ಕರ್ಮಿ ಸಿಬಂದಿ ರಾಘವ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ ಒಟ್ಟು 12 ಗ್ರಾಂ ತೂಕದ 60,000 ರೂ. ಮೌಲ್ಯದ 3 ಚಿನ್ನದ ಸರಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದ.
ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಸಂಪರ್ಕಿಸಿಬೇಕಾದ ಪೊಲೀಸ್ ಅಧಿಕಾರಿಗಳು: ಪಿ ಎ ಹೆಗಡೆ -ಎಸಿಪಿ ಸಿಸಿಬಿ, ಮಂಗಳೂರು ನಗರ -ಮೊ: 9945054333,
ಮಹೇಶ್ ಕುಮಾರ್ , ಎಸಿಪಿ ಕೇಂದ್ರ ಉಪವಿಭಾಗ, ಮಂಗಳೂರು ನಗರ – ಮೊ: 9480805320
ಮಾಹಿತಿದಾರರ ವಿವರವನ್ನು ಗೌಫ್ಯವಾಗಿಡಲಾಗುವುದು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…