ಮಂಗಳೂರು,: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.
ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್ ಗ್ಲಾಸ್ ಧರಿಸಿಕೊಂಡಿರುವ ಶಂಕಿತ ಆರೋಪಿಯ ಸಿಸಿ ಕೆಮರಾದಲ್ಲಿ ಸೆರೆ ಸಿಕ್ಕ ಪೋಟೋ ಬಿಡುಗಡೆಗೊಳಿಸಿದ್ದಾರೆ.
ಈ ವ್ಯಕ್ತಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಅದನ್ನು ಪೊಲೀಸರಿಗೆ ನೀಡುವಂತೆ ಕೋರಲಾಗಿದ್ದು ಮಾಹಿತಿದಾರರ ಗೌಪ್ಯತೆ ಕಾಪಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಜುವೆಲ್ಯರಿಯೊಂದಕ್ಕೆ ಹಾಡುಹಗಲೇ ನುಗ್ಗಿದ್ದ ದುಷ್ಕರ್ಮಿ ಸಿಬಂದಿ ರಾಘವ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ ಒಟ್ಟು 12 ಗ್ರಾಂ ತೂಕದ 60,000 ರೂ. ಮೌಲ್ಯದ 3 ಚಿನ್ನದ ಸರಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದ.
ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಸಂಪರ್ಕಿಸಿಬೇಕಾದ ಪೊಲೀಸ್ ಅಧಿಕಾರಿಗಳು: ಪಿ ಎ ಹೆಗಡೆ -ಎಸಿಪಿ ಸಿಸಿಬಿ, ಮಂಗಳೂರು ನಗರ -ಮೊ: 9945054333,
ಮಹೇಶ್ ಕುಮಾರ್ , ಎಸಿಪಿ ಕೇಂದ್ರ ಉಪವಿಭಾಗ, ಮಂಗಳೂರು ನಗರ – ಮೊ: 9480805320
ಮಾಹಿತಿದಾರರ ವಿವರವನ್ನು ಗೌಫ್ಯವಾಗಿಡಲಾಗುವುದು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…