ಮಂಗಳೂರು: ಜೂನ್ 20 -21 ರಂದು ಮೀನುಗಾರಿಕೆಗೆ ತೆರಳದಂತೆ ಸೂಚನೆ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಜೂನ್ 20 -21 ರಂದು ಮೀನುಗಾರಿಕೆಗೆ ತೆರಳದಂತೆ ಸೂಚನೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಹಾಗೂ ನವಮಂಗಳೂರು ಬಂದರು ಪ್ರಾಧಿಕಾರ, ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜೂನ್ 20 ಮತ್ತು 21ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ.

ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ : ಬಿರಿಯಾನಿ ಹಂಚಿ ಬಕ್ರಿದ್ ಸಂಭ್ರಮಿಸಿದ ಖಾಸಗಿ ಬಸ್ ನ ಮುಸ್ಲಿಂ ಚಾಲಕರು ಹಾಗೂ ನಿರ್ವಾಹಕರು – vishwanews24

ಇನ್ನು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ವರುಣನ ಆರ್ಭಟ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಜೂನ್​ 22ರಿಂದ ಕರಾವಳಿ ಜಿಲ್ಲೆಗಳು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿಯಲಿದ್ದು ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ಮೆಕ್ಕಾದಲ್ಲಿ ತಾಪಮಾನ ಏರಿಕೆ : 550ಕ್ಕೂ ಹೆಚ್ಚು ಹಜ್‌ ಯಾತ್ರಿಕರ ಸಾವು ..! vishwanews24

 

Leave a Reply