ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ ಚಳುವಳಿಗೆ ಪೂರಕ ವಾಗಿ ಸ್ಥಾಪಿಸಲಾಗಿರುವ ಕೇಂದ್ರ ಸಹಕಾರ ಸಚಿವಾಲಯವು ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಜೂ.29ರಿಂದ ಜು.6ರವರೆಗೆ ವಿಶೇಷ ಸಹಕಾರ ಸಪ್ತಾಹವನ್ನು ದೇಶದಾದ್ಯಂತ ಆಚರಿಸಲು ಕೇಂದ್ರ ಸಹಕಾರ ಸಚಿವಾಲಯ ನಿರ್ಧರಿಸಿದೆ.
ಅದರಂತೆ ಜೂ.29ರಂದು ಬೆಳಗ್ಗೆ 10:30ಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಸಹಕಾರದಿಂದ ಸಮೃದ್ಧಿ ಎಂಬ ಧ್ಯೇಯವಾಕ್ಯದೊಂದಿಗೆ ವಿಶೇಷ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ :
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸಂಸದ ಬ್ರಿಜೇಶ್ ಚೌಟ ಉದ್ಘಾಟಿಸುವರು. ಶಾಸಕ ವೇದವ್ಯಾಸ ಕಾಮತ್ ಸಹಕಾರ ಸಪ್ತಾಹದ ಧ್ವಜಾರೋಹಣ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಜಯಕರ ಶೆಟ್ಟಿ ಬಿ. ಇಂದ್ರಾಳಿ, ದ.ಕ.ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್ ಭಾಗವಹಿಸುವರು ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ಹಾಗೂ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…