Featured

ಮಂಗಳೂರು : ಜೆರೋಸಾ ಶಾಲೆ ಪ್ರಕರಣ – ದುರ್ವರ್ತನೆ ತೋರಿದ್ದ ವೇದವ್ಯಾಸ್ ಕಾಮತ್ , ಭರತ್ ಶೆಟ್ಟಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಸ್ಪೀಕರ್ ಖಾದರ್ ಗೆ ಮನವಿ – Vishwanews24

ಮಂಗಳೂರು : ಜೆರೋಸಾ ಶಾಲೆ ಪ್ರಕರಣ – ದುರ್ವರ್ತನೆ ತೋರಿದ್ದ ವೇದವ್ಯಾಸ್ ಕಾಮತ್ , ಭರತ್ ಶೆಟ್ಟಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಸ್ಪೀಕರ್ ಖಾದರ್ ಗೆ ಮನವಿ

ಮಂಗಳೂರು : ಜೆರೋಸಾ ಶಾಲೆ ಪ್ರಕರಣದಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾ.ಭರತ್ ಶೆಟ್ಟಿ ದುರ್ವರ್ತನೆ ತೋರಿದ್ದು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂದು ಜೆಪ್ಪು ಶಾಂತಿನಗರ ನಿವಾಸಿ, ನಗರಪಾಲಿಕೆಯ ಮಾಜಿ ಸದಸ್ಯ ಕೆ.ಭಾಸ್ಕರ್ ರಾವ್‌ ಅವರು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಶಾಲೆಯ ಮುಂದೆ ಶಾಸಕರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಮತ್ತು ನಂತರ ನಡೆದ ಘಟನಾವಳಿಗಳು ಸಮಾಜ ತಲೆತಗ್ಗಿಸುವಂತಿವೆ. ಪ್ರಚೋದನಕಾರಿ ಹೇಳಿಕೆ ನೀಡಿರುವ ಶಾಸಕರು, ಶಿಕ್ಷಕರ ಮುಂದೆ ವಿದ್ಯಾರ್ಥಿಗಳನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾರೆ. ಶಿಕ್ಷಕಿಯ ಮೇಲೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಒತ್ತಡ ಹಾಕಿದ್ದಾರೆ. ಧರ್ಮದ ಆಧಾರದಲ್ಲಿ ವಿದ್ಯಾರ್ಥಿಗಳಿಂದ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿಸಿದ್ದಾರೆ. ಇದೆಲ್ಲವೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಆದ್ದರಿಂದ ಸೂಕ್ತ ತನಿಖೆ ಆಗಬೇಕು’ ಎಂದು ಕೋರಿದ್ದಾರೆ.

 

ಶಾಸಕರು ಸ್ವೀಕರಿಸಿದ ಪ್ರತಿಜ್ಞೆಗೆ ವಿರುದ್ಧವಾಗಿ ವರ್ತಿಸಿದರೆ ಅವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ವಿಧಾನಸಭಾಧ್ಯಕ್ಷರಿಗೆ ಇದೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಖಾದರ್ ಅವರನ್ನು ಬೆಂಗಳೂರಿನ ಅವರ ಕಚೇರಿಯಲ್ಲಿ ಶುಕ್ರವಾರ ಭೇಟಿ ಮಾಡಿ ಭಾಸ್ಕರ್ ರಾವ್‌ ದೂರು ನೀಡಿದ್ದು, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಜೊತೆಗಿದ್ದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

14 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

14 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago