Featured

ಮಂಗಳೂರು : ಜೆರೋಸಾ ಶಾಲೆ ವಿವಾದ – ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ನ ಹೀನ ರಾಜಕಾರಣ : ನಳಿನ್ ಕುಮಾರ್ ಆಕ್ರೋಶ

ಜೆರೋಸಾ ಶಾಲೆ ವಿವಾದ : ಶಾಸಕರ ಮೇಲಿನ ಕೇಸ್ ವಾಪಸ್ ತೆಗೆದುಕೊಳ್ಳಿ ಮತ್ತು ಧರ್ಮದ ಅವಹೇಳನ ಮಾಡಿದ ಶಿಕ್ಷಕಿ ಯ ವಿರುದ್ಧ ಕ್ರಮ ಕೈಗೊಳ್ಳಿ : ನಳಿನ್ ಕುಮಾರ್ ಆಗ್ರಹ

ಮಂಗಳೂರು : ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿ ವಿರುದ್ಧ ಧರ್ಮ ಅವಹೇಳನದ ಆರೋಪ ವಿಚಾರದಲ್ಲಿ ಬಿಜೆಪಿ ಶಾಸಕರ ಮೇಲೆ ಎಫ್‌ಐಆರ್ ದಾಖಲಿಸಿದ ಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಗರಂ ಆಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಕಾಂಗ್ರೆಸ್ ದ್ವಿಮುಖ ನೀತಿ ತುಷ್ಠಿಕರಣದ ನೀತಿ ಅನುಸರಿಸುತ್ತಿದೆ. ಶಾಲೆಯಲ್ಲಿ ಕೋಮು ಭಾವನೆ ಕೆರಳಿಸಿದ ಶಿಕ್ಷಕಿಯನ್ನು ಅಮಾನತುಗೊಳಿಸಿಲ್ಲ ಆದ್ರೆ ಸಾರ್ವಜನಿಕರ ಹೋರಾಟಕ್ಕೆ ನೈತಿಕ ಬೆಂಬಲ ನೀಡಿದ ಶಾಸಕರ ಮೇಲೆ ಕೇಸು ದಾಖಲಿಸಿಲಾಗಿದೆ. ಕಾನೂನು ಕ್ರಮ ಕೈಗೊಂಡ ಶಿಕ್ಷಣಾಧಿಕಾರಿಯನ್ನು ವರ್ಗಾವಣೆ ಮಾಡಿದ್ದಾರೆ. ಇದು ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ನ ಹೀನ ರಾಜಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಜಿಲ್ಲೆಯಲ್ಲಿ ಸುಂದರ್ ರಾಮ್ ಶೆಟ್ಟಿ ರಸ್ತೆ ಪ್ರಕರಣ ನಡೆದಿತ್ತು. ಅಲೋಶಿಯಸ್ ಶಾಲೆಯ ವಿದ್ಯಾರ್ಥಿಗಳನ್ನು ರಸ್ತೆಯಲ್ಲಿ ಕೂರಿಸಿ ಪ್ರತಿಭಟನೆ ಮಾಡಿದ್ರು ಆಗ ಆಗ ಶಾಸಕರ ಮೇಲೆ ಯಾವ ಕೇಸು ಹಾಕಲಿಲ್ಲ ಆದ್ರೆ ಈಗ ಶಾಸಕರಾದ ಭರತ್ ಶೆಟ್ಟಿ ಹಾಗು ವೇದವ್ಯಾಸ್ ಕಾಮತ್ ವಿರುದ್ಧದ ಕೇಸು ದಾಖಲಿಸಲಾಗಿದೆ. ಇದನ್ನು ನಾವು ಖಂಡಿಸುತ್ತೇವೆ ನ್ಯಾಯಕ್ಕಾಗಿ ಹೋರಾಟ ಮಾಡುತ್ತೇವೆ ಇದಕ್ಕಾಗಿ ನಾವು ಕಾಂಗ್ರೆಸ್ ಸರಕಾರದ ಎದುರು ಭಿಕ್ಷೆ ಬೇಡೋದಿಲ್ಲ ಸಾರ್ವಜನಿಕವಾಗಿ ಹೋರಾಟ ಮಾಡುತ್ತೇವೆ. ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಗುಡುಗಿದ್ದಾರೆ. ಶಾಲೆಯಲ್ಲಿ ನಡೆದಿದ್ದು ಕಾಂಗ್ರೆಸ್ -ಬಿಜೆಪಿ ಅಥವಾ ಹಿಂದೂ -ಕ್ರೈಸ್ತರ ಹೋರಾಟ ಅಲ್ಲ , ತಮ್ಮ ಮಕ್ಕಳಿಗಾದ ಅನ್ಯಾಯದ ವಿರುದ್ಧ ಪೋಷಕರು ಪ್ರತಿಭಟಿಸಿದ್ದಾರೆ. ಆ ಹೋರಾಟಕ್ಕೆ ಬೆಂಗಾವಲಾಗಿ ಶಾಸಕರು ಬಂದಿದ್ದಾರೆ ಎಂದ ಕಟೀಲ್ ಕಾಂಗ್ರೆಸ್ ಸರ್ಕಾರಕ್ಕೆ ನಮ್ಮ ಮೂರು ಆಗ್ರಹಗಳಿವೆ. ಒಂದು ವರ್ಗಾವಣೆ ಮಾಡಿದ ಅಧಿಕಾರಿಯನ್ನ ವಾಪಸ್ ಕರೆಸಿಕೊಳ್ಳಿ ಎರಡು ಶಾಸಕರ ಕೇಸ್ ವಾಪಸ್ ತೆಗೆದುಕೊಳ್ಳಿ ಮತ್ತು ಧರ್ಮದ ಅವಹೇಳನ ಮಾಡಿದ ಶಿಕ್ಷಕಿ ಯ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಶಾಲೆ ಬಳಿ ಪೋಷಕರು ಪಾಲಕರು ಹೋರಾಟವನ್ನ ಕೈಗೆತ್ತಿಕೊಂಡಿದ್ರು. ಹೋರಾಟ ಗಮನಕ್ಕೆ ಬಂದ ಮೇಲೆ ಸ್ಥಳಕ್ಕೆ ಹೋಗೋದು ಜನಪ್ರತಿನಿಧಿಗಳ ಜವಾಬ್ದಾರಿ ಆಗಿದ್ದು ನಾನು ಇದ್ದಿದ್ರೆ ನಾನೂ ಹೋರಾಟಕ್ಕೆ ಹೋಗುತ್ತಿದ್ದೆ ಆದ್ದರಿಂದ ಜನರ ಸಮಸ್ಯೆ ಆಲಿಸಲು ಪರಿಹರಿಸಲು ಶಾಸಕರು ಹೋಗಿದ್ದಾರೆ. ಪಾಲಕರ ಒತ್ತಾಯವನ್ನು ಸರಕಾರದ ಗಮನಕ್ಕೆ ತಂದಿದ್ದಾರೆ.ಆ ಕೆಲಸ ತಪ್ಪು ಎಂದು ವಿದ್ಯಾರ್ಥಿಗಳು ಸಾರ್ವಜನಿಕರು ಹೇಳಿದ್ದಾರೆ. ರಾಮನನ್ನ ಅವಹೇಳನ ಮಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ದುಃಖವಾಗಿದೆ ಹೊರತು ಇದನ್ನ ನಾವು ರಾಜಕೀಯಕ್ಕೆ ಬಳಸಿಕೊಂಡಿಲ್ಲ ಆದ್ರೆ ಇದರಲ್ಲಿ ರಾಜಕೀಯವನ್ನ ಮಾಡುವ ಕೆಲಸ ಕಾಂಗ್ರೆಸ್ ಮಾಡಿದ್ದು ಹಿಂದೂ ವಿರೋಧಿ ಸರ್ಕಾರ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಕಾಂಗ್ರೆಸ್ ವಿರುದ್ದ ಹರಿಹಾಯ್ದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

20 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

20 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

20 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

21 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

21 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

21 hours ago