ಮಂಗಳೂರು: ಇಲ್ಲಿನ ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (30)ಗೆ ಗಾಯಗೊಂಡವರು. ಇವರಿಬ್ಬರು ಉಳ್ಳಾಲ ಠಾಣಾ ವ್ಯಾಪ್ತಿಯ ಕೇಸ್ ನಲ್ಲಿ ವಿಚಾರಣಾಧೀನ ಖೈದಿಗಳಾಗಿದ್ದಾರೆ.
ರೌಡಿ ಶೀಟರ್ಗಳಾಗಿರೋ ಟೋಪಿ ನೌಫಲ್ ಮತ್ತು ಗ್ಯಾಂಗ್ ನಿಂದ ಇಬ್ಬರ ಮೇಲೆ ದಾಳಿ ನಡೆದಿದೆ. ಅಡುಗೆ ಮನೆಯಲ್ಲಿದ್ದ ಕೆಲವು ಹರಿತವಾದ ವಸ್ತುಗಳಿಂದ ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು, ತಲೆ, ಭುಜ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿರುವ ಮಾಹಿತಿ ಸಿಕ್ಕಿದೆ.
ಸದ್ಯ ಇಬ್ಬರೂ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ. ಆರೋಪಿಗಳು ಮತ್ತು ಹಲ್ಲೆಗೊಳಗಾದ ಇಬ್ಬರೂ ಅನೇಕ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಅಲ್ಲದೇ ರೌಡಿ ಶೀಟರ್ ಗಳಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಘಟನೆ ಜೈಲಿನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರಾಗೃಹದ ಅಧಿಕಾರಿಗಳ ದೂರಿನ ಮೇರೆಗೆ ಮುಫದ್ ರಿಫಾತ್ (28), ಮುಹಮ್ಮದ್ ರಿಜ್ವಾನ್ (34), ಇಬ್ರಾಹಿಂ ಕಲ್ಲೆಲ್ (30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್ ಹಾಗೂ ಜೈನುದ್ದೀನ್ ಮೇಲೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…