ಮಂಗಳೂರು,: ಜೈಲು ಅಡುಗೆಮನೆಯ ಗೇಟಿಗೆ ಬೀಗ ಹಾಕಿದ ಬಳಿಕ ಕೈದಿಯೊಬ್ಬ ಗ್ಯಾಸ್ ಸಿಲಿಂಡರ್ ಹಿಡಿದು ಗೇಟ್ ಹಾಗೂ ಬೀಗಕ್ಕೆ ಹೊಡೆದು, ಗೇಟ್ ತೆರೆಯುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.
ಜೈಲು ಅಧಿಕಾರಿಗಳು ಅಡುಗೆಮನೆಯ ಗೇಟಿಗೆ ಬೀಗ ಹಾಕಿದ ಸಂದರ್ಭದಲ್ಲಿ ಫೈಜಲ್ ಎಂಬಾತ ಸಮೀಪದಲ್ಲಿದ್ದ ಗ್ಯಾಸ್ ಸಿಲಿಂಡರ್ನ್ನು ತೆಗೆದುಕೊಂಡು ಗೇಟ್ ಮತ್ತು ಬೀಗಕ್ಕೆ ಹೊಡೆಯಲು ಆರಂಭಿಸಿದ್ದಾನೆ ಎನ್ನಲಾಗಿದೆ. ಜೋರಾಗಿ ಕೂಗುತ್ತಾ ಗೇಟ್ ತೆರೆಯುವಂತೆ ಒತ್ತಾಯಿಸಿದ ಆತ, ಇಲ್ಲದಿದ್ದರೆ ಗ್ಯಾಸ್ ಸಿಲಿಂಡರ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಳಿಕ ಆರೋಪಿಗಳು ಇತರ ಕೈದಿಗಳನ್ನು ಪ್ರಚೋದಿಸಿ ಒಟ್ಟುಗೂಡಿಸಿದ್ದು, ಬೀಡಿಗಳನ್ನು ನೀಡುವವರೆಗೆ ತಮ್ಮ ಸೆಲ್ಗಳಿಗೆ ಹಿಂತಿರುಗದಂತೆ ಪ್ರೇರೇಪಿಸಿದ್ದಾರೆ ಎನ್ನಲಾಗಿದೆ. ಇದರಿಂದ ಜೈಲಿನಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿದ್ದು, ಜೈಲು ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ಅಡ್ಡಿಯುಂಟಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…
ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ : ಚಾಲಕನ ನಿಯಂತ್ರಣ…
ಬೆಳ್ತಂಗಡಿ: ಗಡಾಯಿಕಲ್ಲು ಚಾರಣಕ್ಕೆ ಮುಕ್ತ ; ದಿನಕ್ಕೆ 500 ಪ್ರವಾಸಿಗರಿಗೆ ಮಾತ್ರ ಅವಕಾಶ ಬೆಳ್ತಂಗಡಿ: ತಾಲೂಕಿನ ಗಡಾಯಿಕಲ್ಲು ಚಾರಣ ತಾಣವು ಸೆ.…
ಕುಂದಾಪುರ: ಮೀನುಗಾರರ ಹಿತ ಕಾಯಲು ಸರಕಾರ ಬದ್ಧ: ಸಚಿವ ಬಸವಂತಪ್ಪ ಕುಂದಾಪುರ: ಮೀನುಗಾರಿಕೆ ವಲಯದ ಜ್ವಲಂತ ಸಮಸ್ಯೆಗಳ ಕುರಿತು ಅರಿಯಲು,…
ಬೆಂಗಳೂರು: ಯುವತಿಯ ಅಪಹರಣ ಯತ್ನದಲ್ಲಿ ಸರಣಿ ಅಪಘಾತ.. 35ಕ್ಕೂ ಹೆಚ್ಚು ವಾಹನಗಳಿಗೆ ಕಾರು ಡಿಕ್ಕಿ .. ಮೂವರು ಆರೋಪಿಗಳು ಪೊಲೀಸರ…
ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಉಡುಪಿಯ ಜಿಲ್ಲಾಸ್ಪತ್ರೆಯ ಲೋಕಾರ್ಪಣೆಗೆ ಅಗತ್ಯ ನಿರ್ಣಯ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…