ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ದುಷ್ಕರ್ಮಿಗಳ ದುಷ್ಕೃತ್ಯ ಎಂದು ಶಂಕೆ ವ್ಯಕ್ತವಾಗಿದೆ.
ಮೃತಪಟ್ಟ ಯುವಕ ಉತ್ತರ ಭಾರತದ ಮೂಲದವನೆಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದ್ದು, ಆತನ ಗುರುತು ಇನ್ನೂ ಪತ್ತೆಯಾಗಿಲ್ಲ. ಎಂಆರ್ಪಿಎಲ್-ಸುರತ್ಕಲ್ ರಸ್ತೆಯ ಜೋಕಟ್ಟೆಗೆ ಸಂಪರ್ಕ ಕಲ್ಪಿಸುವ ಸಣ್ಣ ಫ್ಲೈಓವರ್ ಬಳಿಯ ರಸ್ತೆಬದಿಯ ಚರಂಡಿಯಲ್ಲಿ ಶವ ಪತ್ತೆಯಾಗಿದೆ.
ಘಟನಾ ಸ್ಥಳದ ಸಮೀಪವಿರುವ ಮನೆಯೊಂದರ ಗೇಟ್ ಬಳಿ ರಕ್ತದ ಕಲೆಗಳು ಕಂಡುಬಂದಿದ್ದು, ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಶವ ಪತ್ತೆಯಾದ ಸ್ಥಳದಿಂದ ಸುಮಾರು ಒಂದೂವರೆ ಮೀಟರ್ ದೂರದಲ್ಲಿರುವ ಈ ಮನೆಯ ಗೇಟ್ ಬಳಿ ರಕ್ತದ ಕಲೆಗಳಿರುವುದರಿಂದ, ಯುವಕನನ್ನು ಕೊಲೆ ಮಾಡಿ ನಂತರ ಇಲ್ಲಿಗೆ ತಂದು ಎಸೆದಿರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.
ಪಣಂಬೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೃತದೇಹವನ್ನು ಹೆಚ್ಚಿನ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…