ಮಂಗಳೂರು: ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ಮಾರ್ಪಾಡಾಗುತ್ತಿದೆಯ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿದೆ.
ಹೋಟೆಲ್ ಹಾಗೂ ಇತರ ಲಾಡ್ಜ್ ಗಳಲ್ಲಿ ರೂಮ್ ಮಾಡಿ ಜೋಡಿಗಳ ಅನೈತಿಕ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ ಎಂದು ಖುಷಿ ಪಟ್ಟರೆ ಇತ್ತ ಐಷಾರಾಮಿ ಖಾಸಗಿ ಬಸ್ ಗಳಲ್ಲಿ ಜೋಡಿಗಳ ಪ್ರಯಾಣ ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಮನೆ ಮಾಡಿದೆ. ಲಾಡ್ಜ್ ಗಳಲ್ಲಿ ಜೋಡಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ದಾಖಲೆಗಳ ವಿಚಾರಣೆ ಸಹಿತ ಸಂಘಟನೆಗಳ ದಾಳಿಗಳಿಗೆ ಹೆದರಿ ಈ ರೀತಿಯಲ್ಲಿ ಬಸ್ ಗಳನ್ನು ಉಪಯೋಗಿಸಲಾಗುತ್ತಿದೆ ಎನ್ನಲಾಗುತ್ತಿದೆ.
ಸ್ಲೀಪಿಂಗ್ ಕೋಚ್ ಬಸ್ ನಲ್ಲಿ ಪ್ರಯಾಣ ಮಾಡುವ ವೇಳೆ ಜೋಡಿಗಳಿಗೆ ಯಾವುದೇ ಅಡ್ಡಿ ಆತಂಕಗಳಿಲ್ಲ. ದೂರದ ಬೆಂಗಳೂರು ಸಹಿತ ಅನೇಕ ಊರುಗಳಿಗೆ ಸ್ಲೀಪಿಂಗ್ ಕೋಚ್ ಬಸ್ ಗಳಲ್ಲಿ ಟಿಕೆಟ್ ಕಾಯ್ದಿರಿಸುವ ಜೋಡಿಗಳು ಅದೇ ಬಸ್ ನಲ್ಲಿ ವಾಪಾಸು ಊರಿಗೆ ಬರುವಂತೆ ರಿಟರ್ನ್ ಟಿಕೆಟ್ ಕೂಡ ಮಾಡಲಾಗುವ ಬಗ್ಗೆ ಮಾಹಿತಿ ಹೊರಬಿದ್ದಿದೆ.
ಇಂತಹ ಚಟುವಟಿಕೆಗಳು ಮುಂದೊಂದು ದಿನ ಸಮಾಜದಲ್ಲಿ ಅಶಾಂತಿ ಹಬ್ಬಲು ಮೂಲಕಾರಣವಾಗಬಹುದು ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿಬಂದಿದೆ. ಡಿ.15 ರಂದು ಗುರುವಾರ ರಾತ್ರಿ ಬೆಂಗಳೂರಿಗೆ ತೆರಳುವ ದುರ್ಗಾಂಬಾ ಬಸ್ ನಲ್ಲಿ ಅನ್ಯ ಸಮುದಾಯದ ಜೋಡಿಗಳು ಪ್ರಯಾಣ ನಡೆಸಿ ಗೊಂದಲಕ್ಕೆ ಕಾರಣವಾದ ಬಳಿಕ ಸಾರ್ವಜನಿಕ ವಲಯದಲ್ಲಿ ಈ ಮಾತುಗಳು ಕೇಳಿ ಬಂದಿವೆ. ಒಂದು ವೇಳೆ ಇಂತಹ ದಂದೆಗಳು ಹೈಟೆಕ್ ಸ್ಲೀಪಿಂಗ್ ಕೋಚ್ ಬಸ್ ಗಳಲ್ಲಿ ನಡೆಯುವುದೇ ಆದರೆ ಪೊಲೀಸರು ಕ್ರಮ ಕೈಗೊಳ್ಳುವ ಅನಿವಾರ್ಯತೆ ಕೂಡ ಇದೆ.
ಸಮಾಜದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗುವ ಮೊದಲೇ ಎಚ್ಚರಿಕೆ ವಹಿಸುವ ಜವಬ್ದಾರಿ ಇಲಾಖೆಯ ಮೂಲಕ ಆಗಬೇಕಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…