ಮಂಗಳೂರು: ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ಮಾರ್ಪಾಡಾಗುತ್ತಿದೆಯ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿದೆ.
ಹೋಟೆಲ್ ಹಾಗೂ ಇತರ ಲಾಡ್ಜ್ ಗಳಲ್ಲಿ ರೂಮ್ ಮಾಡಿ ಜೋಡಿಗಳ ಅನೈತಿಕ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ ಎಂದು ಖುಷಿ ಪಟ್ಟರೆ ಇತ್ತ ಐಷಾರಾಮಿ ಖಾಸಗಿ ಬಸ್ ಗಳಲ್ಲಿ ಜೋಡಿಗಳ ಪ್ರಯಾಣ ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಮನೆ ಮಾಡಿದೆ. ಲಾಡ್ಜ್ ಗಳಲ್ಲಿ ಜೋಡಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ದಾಖಲೆಗಳ ವಿಚಾರಣೆ ಸಹಿತ ಸಂಘಟನೆಗಳ ದಾಳಿಗಳಿಗೆ ಹೆದರಿ ಈ ರೀತಿಯಲ್ಲಿ ಬಸ್ ಗಳನ್ನು ಉಪಯೋಗಿಸಲಾಗುತ್ತಿದೆ ಎನ್ನಲಾಗುತ್ತಿದೆ.
ಸ್ಲೀಪಿಂಗ್ ಕೋಚ್ ಬಸ್ ನಲ್ಲಿ ಪ್ರಯಾಣ ಮಾಡುವ ವೇಳೆ ಜೋಡಿಗಳಿಗೆ ಯಾವುದೇ ಅಡ್ಡಿ ಆತಂಕಗಳಿಲ್ಲ. ದೂರದ ಬೆಂಗಳೂರು ಸಹಿತ ಅನೇಕ ಊರುಗಳಿಗೆ ಸ್ಲೀಪಿಂಗ್ ಕೋಚ್ ಬಸ್ ಗಳಲ್ಲಿ ಟಿಕೆಟ್ ಕಾಯ್ದಿರಿಸುವ ಜೋಡಿಗಳು ಅದೇ ಬಸ್ ನಲ್ಲಿ ವಾಪಾಸು ಊರಿಗೆ ಬರುವಂತೆ ರಿಟರ್ನ್ ಟಿಕೆಟ್ ಕೂಡ ಮಾಡಲಾಗುವ ಬಗ್ಗೆ ಮಾಹಿತಿ ಹೊರಬಿದ್ದಿದೆ.
ಇಂತಹ ಚಟುವಟಿಕೆಗಳು ಮುಂದೊಂದು ದಿನ ಸಮಾಜದಲ್ಲಿ ಅಶಾಂತಿ ಹಬ್ಬಲು ಮೂಲಕಾರಣವಾಗಬಹುದು ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿಬಂದಿದೆ. ಡಿ.15 ರಂದು ಗುರುವಾರ ರಾತ್ರಿ ಬೆಂಗಳೂರಿಗೆ ತೆರಳುವ ದುರ್ಗಾಂಬಾ ಬಸ್ ನಲ್ಲಿ ಅನ್ಯ ಸಮುದಾಯದ ಜೋಡಿಗಳು ಪ್ರಯಾಣ ನಡೆಸಿ ಗೊಂದಲಕ್ಕೆ ಕಾರಣವಾದ ಬಳಿಕ ಸಾರ್ವಜನಿಕ ವಲಯದಲ್ಲಿ ಈ ಮಾತುಗಳು ಕೇಳಿ ಬಂದಿವೆ. ಒಂದು ವೇಳೆ ಇಂತಹ ದಂದೆಗಳು ಹೈಟೆಕ್ ಸ್ಲೀಪಿಂಗ್ ಕೋಚ್ ಬಸ್ ಗಳಲ್ಲಿ ನಡೆಯುವುದೇ ಆದರೆ ಪೊಲೀಸರು ಕ್ರಮ ಕೈಗೊಳ್ಳುವ ಅನಿವಾರ್ಯತೆ ಕೂಡ ಇದೆ.
ಸಮಾಜದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗುವ ಮೊದಲೇ ಎಚ್ಚರಿಕೆ ವಹಿಸುವ ಜವಬ್ದಾರಿ ಇಲಾಖೆಯ ಮೂಲಕ ಆಗಬೇಕಾಗಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…