Featured

ಮಂಗಳೂರು:  ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗುತ್ತಿದೆಯೆ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ..? ಸಾರ್ವಜನಿಕರಲ್ಲಿ ಆತಂಕ – Vishwanews24

ಮಂಗಳೂರು:  ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗುತ್ತಿದೆಯೆ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ..? ಸಾರ್ವಜನಿಕರಲ್ಲಿ ಆತಂಕ

ಮಂಗಳೂರು: ಜೋಡಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿ ಖಾಸಗಿ ಸ್ಲೀಪಿಂಗ್ ಕೋಚ್ ಬಸ್ ಗಳು ಮಾರ್ಪಾಡಾಗುತ್ತಿದೆಯ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿದೆ.

ಹೋಟೆಲ್ ಹಾಗೂ ಇತರ ಲಾಡ್ಜ್ ಗಳಲ್ಲಿ ರೂಮ್ ಮಾಡಿ ಜೋಡಿಗಳ ಅನೈತಿಕ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ ಎಂದು ಖುಷಿ ಪಟ್ಟರೆ ಇತ್ತ ಐಷಾರಾಮಿ ಖಾಸಗಿ ಬಸ್ ಗಳಲ್ಲಿ ಜೋಡಿಗಳ ಪ್ರಯಾಣ ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಮನೆ ಮಾಡಿದೆ. ಲಾಡ್ಜ್ ಗಳಲ್ಲಿ ಜೋಡಿಗಳಿಗೆ ಸಾಕಷ್ಟು ಪ್ರಮಾಣದಲ್ಲಿ ದಾಖಲೆಗಳ ವಿಚಾರಣೆ ಸಹಿತ ಸಂಘಟನೆಗಳ ದಾಳಿಗಳಿಗೆ ಹೆದರಿ ಈ ರೀತಿಯಲ್ಲಿ ಬಸ್ ಗಳನ್ನು ಉಪಯೋಗಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಸ್ಲೀಪಿಂಗ್ ಕೋಚ್ ಬಸ್ ನಲ್ಲಿ ಪ್ರಯಾಣ ಮಾಡುವ ವೇಳೆ ಜೋಡಿಗಳಿಗೆ ಯಾವುದೇ ಅಡ್ಡಿ ಆತಂಕಗಳಿಲ್ಲ. ದೂರದ ಬೆಂಗಳೂರು ಸಹಿತ ಅನೇಕ ಊರುಗಳಿಗೆ ಸ್ಲೀಪಿಂಗ್ ಕೋಚ್ ಬಸ್ ಗಳಲ್ಲಿ ಟಿಕೆಟ್ ಕಾಯ್ದಿರಿಸುವ ಜೋಡಿಗಳು ಅದೇ ಬಸ್ ನಲ್ಲಿ ವಾಪಾಸು ಊರಿಗೆ ಬರುವಂತೆ ರಿಟರ್ನ್ ಟಿಕೆಟ್ ಕೂಡ ಮಾಡಲಾಗುವ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಇಂತಹ ಚಟುವಟಿಕೆಗಳು ಮುಂದೊಂದು ದಿನ ಸಮಾಜದಲ್ಲಿ ಅಶಾಂತಿ ಹಬ್ಬಲು ಮೂಲಕಾರಣವಾಗಬಹುದು ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮೂಡಿಬಂದಿದೆ. ಡಿ.15 ರಂದು ಗುರುವಾರ ರಾತ್ರಿ ಬೆಂಗಳೂರಿಗೆ ತೆರಳುವ ದುರ್ಗಾಂಬಾ ಬಸ್ ನಲ್ಲಿ ಅನ್ಯ ಸಮುದಾಯದ ಜೋಡಿಗಳು ಪ್ರಯಾಣ ನಡೆಸಿ ಗೊಂದಲಕ್ಕೆ ಕಾರಣವಾದ ಬಳಿಕ ಸಾರ್ವಜನಿಕ ವಲಯದಲ್ಲಿ ಈ ಮಾತುಗಳು ಕೇಳಿ ಬಂದಿವೆ. ಒಂದು ವೇಳೆ ಇಂತಹ ದಂದೆಗಳು ಹೈಟೆಕ್ ಸ್ಲೀಪಿಂಗ್ ಕೋಚ್ ಬಸ್ ಗಳಲ್ಲಿ ನಡೆಯುವುದೇ ಆದರೆ ಪೊಲೀಸರು ಕ್ರಮ ಕೈಗೊಳ್ಳುವ ಅನಿವಾರ್ಯತೆ ಕೂಡ ಇದೆ.

ಸಮಾಜದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗುವ ಮೊದಲೇ ಎಚ್ಚರಿಕೆ ವಹಿಸುವ ಜವಬ್ದಾರಿ ಇಲಾಖೆಯ ಮೂಲಕ ಆಗಬೇಕಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago