ಮಂಗಳೂರು : ಜ್ಯುವೆಲರಿ ಮಾಲೀಕರ ಕೊಲೆ ಪ್ರಕರಣ: ಕಾಸರಗೋಡಿನಲ್ಲಿ ʼಆರೋಪಿ ಅರೆಸ್ಟ್ʼ – Vishwanews24
ಮಂಗಳೂರು ಜ್ಯುವೆಲರಿ ಮಾಲೀಕರ ಕೊಲೆ ಪ್ರಕರಣ: ಕಾಸರಗೋಡಿನಲ್ಲಿ ʼಆರೋಪಿ ಅರೆಸ್ಟ್ʼ
ಮಂಗಳೂರು : ಜ್ಯುವೆಲ್ಲರಿಗೆ ನುಗ್ಗಿ ಮಾಲೀಕರ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಒಂದು ತಿಂಗಳ ಬಳಿಕ ಕಾಸರಗೋಡಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಕೇರಳದ ಕಲ್ಲಿಕೋಟೆಯ ಚಟ್ಟನಾಡುತ್ ಕೆಳಮನೆ ನಿವಾಸಿ ಶಿಫಾಸ್(33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಕಳೆದ ಫೆಬ್ರವರಿ 3ರಂದು ಮಂಗಳೂರಿನ ಹಂಪನ ಕಟ್ಟೆಯಲ್ಲಿರೋ ಜುವೆಲ್ಲರಿಗೆ ನುಗ್ಗಿ ಅತ್ತಾವರ ನಿವಾಸಿ ರಾಘವ(50) ಕೊಲೆಗೈದು ಎಸ್ಕೇಪ್ ಆಗಿದ್ದ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾಸರಗೋಡು ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಡಿವೈಎಸ್ಪಿ ಸುಧಾಕರನ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ದರೋಡೆ ನಡೆಸುವ ಉದ್ದೇಶದಿಂದಲೇ ಕೊಲೆ ನಡೆಸಿರುವ ಬಗ್ಗೆ ಮಾಹಿತಿ ಬಹಿರಂಗವಾಗಿದೆ . ಅತ್ತಾವರ ನಿವಾಸಿ ರಾಘವ ಆಚಾರ್ಯ ಎಂಬವರು ಅಂಗಡಿಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ನಡೆದಿತ್ತು ಎನ್ನಲಾಗಿದ್ದು, ಅಂಗಡಿ ಮಾಲಕರು ಊಟ ಮಾಡಿ ಬಂದಾಗ ಘಟನೆ ಗಮನಕ್ಕೆ ಬಂದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
