ಮಂಗಳೂರು : ಜ್ಯುವೆಲ್ಲರಿಗೆ ನುಗ್ಗಿ ಮಾಲೀಕರ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಒಂದು ತಿಂಗಳ ಬಳಿಕ ಕಾಸರಗೋಡಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಕೇರಳದ ಕಲ್ಲಿಕೋಟೆಯ ಚಟ್ಟನಾಡುತ್ ಕೆಳಮನೆ ನಿವಾಸಿ ಶಿಫಾಸ್(33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಕಳೆದ ಫೆಬ್ರವರಿ 3ರಂದು ಮಂಗಳೂರಿನ ಹಂಪನ ಕಟ್ಟೆಯಲ್ಲಿರೋ ಜುವೆಲ್ಲರಿಗೆ ನುಗ್ಗಿ ಅತ್ತಾವರ ನಿವಾಸಿ ರಾಘವ(50) ಕೊಲೆಗೈದು ಎಸ್ಕೇಪ್ ಆಗಿದ್ದ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾಸರಗೋಡು ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಡಿವೈಎಸ್ಪಿ ಸುಧಾಕರನ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ದರೋಡೆ ನಡೆಸುವ ಉದ್ದೇಶದಿಂದಲೇ ಕೊಲೆ ನಡೆಸಿರುವ ಬಗ್ಗೆ ಮಾಹಿತಿ ಬಹಿರಂಗವಾಗಿದೆ . ಅತ್ತಾವರ ನಿವಾಸಿ ರಾಘವ ಆಚಾರ್ಯ ಎಂಬವರು ಅಂಗಡಿಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ನಡೆದಿತ್ತು ಎನ್ನಲಾಗಿದ್ದು, ಅಂಗಡಿ ಮಾಲಕರು ಊಟ ಮಾಡಿ ಬಂದಾಗ ಘಟನೆ ಗಮನಕ್ಕೆ ಬಂದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…