Featured

ಮಂಗಳೂರು: ಜ. 6ರಂದು ಕುದ್ರೋಳಿಯಿಂದ ಬೆಂಗಳೂರುವರೆಗೆ ಐತಿಹಾಸಿಕ ಪಾದಯಾತ್ರೆ –  ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಚಾಲನೆ – Vishwanews24

ಮಂಗಳೂರು: ಜ. 6ರಂದು ಕುದ್ರೋಳಿಯಿಂದ ಬೆಂಗಳೂರುವರೆಗೆ ಐತಿಹಾಸಿಕ ಪಾದಯಾತ್ರೆ –  ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಚಾಲನೆ

ಬಿಲ್ಲವ, ಈಡಿಗ ಸೇರಿ 26 ಪಂಗಡಗಳ ಅಭಿವೃದ್ಧಿ , ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಾದಯಾತ್ರೆಗೆ ನಿರ್ಧಾರ..

ಕಲಬುರಗಿ ಶರಣ ಬಸವೇಶ್ವರ ಮಠದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ..

ಮಂಗಳೂರು: ಬಿಲ್ಲವ, ಈಡಿಗ, ನಾಮಧಾರಿ ಸೇರಿದಂತೆ 26 ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸುವ ನಿಟ್ಟಿನಲ್ಲಿ ಜ. 6ರಂದು ಮಂಗಳೂರಿನ ಶ್ರೀಕ್ಷೇತ್ರ ಕುದ್ರೋಳಿಯಿಂದ ಬೆಂಗಳೂರುವರೆಗೆ ಕೈಗೊಳ್ಳಲಾಗುವ 658 ಕಿ.ಮೀ. ದೂರದ ಐತಿಹಾಸಿಕ ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರು ಉದ್ಘಾಟಿಸಲಿದ್ದಾರೆ ಎಂದು ಕಲಬುರಗಿ ಶರಣ ಬಸವೇಶ್ವರ ಮಠದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಯು ಉಡುಪಿ, ಬ್ರಹ್ಮಾವರ, ಮಾಸ್ತಿಕಟ್ಟೆ ಹೊಸನಗರವಾಗಿ ತೀರ್ಥಹಳ್ಳಿ, ಸಾಗರ, ಶಿವಮೊಗ್ಗ, ಚೆನ್ನಗಿರಿ, ಶಿಕಾರಿಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮಾರ್ಗವಾಗಿ ಬೆಂಗಳೂರು ತಲುಪಲಿದೆ. ಸುಮಾರು 35 ದಿನಗಳವರೆಗೆ ಈ ಪಾದಯಾತ್ರೆಯು ದಿನಕ್ಕೆ 20 ಕಿ.ಮೀ.ನಂತೆ ಸಾಗಲಿದೆ. ಬಳಿಕ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ತಾನು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದೇನೆ ಎಂದರು.

ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಿರ್ದೇಶಕ `ಸಯ್ಯದ್ ಅಶ್ರಫ್’ ಹೃದಯಾಘಾತದಿಂದ ನಿಧನ – Vishwanews24

ಬ್ರಹ್ಮಶ್ರೀ ನಾರಾಯಣ ಗುರು ನಿಗಮ ಸ್ಥಾಪಿಸಿ 500 ಕೋಟಿ ರೂ. ಮೀಸಲಿಡಬೇಕು. ನಮ್ಮ ಸಮುದಾಯದ ಕುಲಕಸುಬು ಶೇಂದಿ ಇಳಿಸುವಿಕೆಗೆ ರಾಜ್ಯಾದ್ಯಂತ ಅವಕಾಶ ನೀಡಬೇಕು. ಬೇರೆ ರಾಜ್ಯಗಳಿಂದಲೂ ಶೇಂದಿ ತಂದು ಮಾರಾಟಕ್ಕೆ ಅವಕಾಶ ಮಾಡಬೇಕು. ಬಿಲ್ಲವ ಸಮುದಾಯ ಈಗ 2ಎ ಮೀಸಲಾತಿ ಕೆಟಗರಿಯಲ್ಲಿದೆ.

ಬೇರೆ ಸಮುದಾಯದವರಿಗೂ 2ಎ ಕೆಟಗರಿಯನ್ನು ಸರಕಾರ ನೀಡುವುದಾದಲ್ಲಿ ಈಗ ಇರುವ ನಮ್ಮ ಮೀಸಲಾತಿಯನ್ನು ಹೆಚ್ಚಳ ಮಾಡಿಕೊಂಡು ಬೇಕಾದರೆ ನೀಡಲಿ. ಸಿಗಂಧೂರು ಶ್ರೀ ಚೌಡೇಶ್ವರಿ ದೇವಾಲಯವನ್ನು ಸರಕಾರ ತನ್ನ ವಶಕ್ಕೆ ತೆಗೆದುಕೊಳ್ಳದಂತೆ ರಾಜಕೀಯದಲ್ಲಿ ಪ್ರಾತಿನಿಧ್ಯ ನೀಡಲು ಬಿಲ್ಲವ, ಈಡಿಗ ಸೇರಿದಂತೆ ನಮ್ಮ ಸಮುದಾಯದ ಮೂವರು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಈ ಪಾದಯಾತ್ರೆ ನಡೆಸಲಾಗುತ್ತದೆ ಎಂದು ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು.

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಆಯ್ಕೆ – Vishwanews24

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

16 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

17 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

17 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

18 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

18 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago