ಮಂಗಳೂರು: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಹಣವನ್ನು ಉಪಾಯದಿಂದ ವಂಚಕನೊಬ್ಬ ತನ್ನ ಖಾತೆಗೆ ವರ್ಗಾಯಿಸಿರುವುದಾಗಿ ವರದಿಯಾಗಿದ್ದು, ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ವ್ಯಕ್ತಿಯೊಬ್ಬರು ಯಾತ್ರಾ ಡಾಟ್ ಕಾಮ್ ಎನ್ನುವ ವೆಬ್ಸೈಟ್ನಲ್ಲಿ ಜ. 8ರಂದು 6,380 ರೂ. ಪಾವತಿ ಟಿಕೆಟ್ ಬುಕ್ ಮಾಡಿದ್ದರು. ಆದರೆ ಬಳಿಕ 99,860ರೂ. ಕಳೆದುಕೊಂಡಿದ್ದಾರೆ. ಟಿಕೆಟ್ ಬುಕ್ ಮಾಡಿದರೂ, ಟಿಕೆಟ್ ಬಾರದ ಹಿನ್ನೆಲೆಯಲ್ಲಿ ಸಂಸ್ಥೆಯವರಿಗೆ ಕರೆ ಮಾಡಿ ಹಣ ಹಿಂದಿರುಗಿರುವಂತೆ ಆಗ್ರಹಿಸಿದ್ದಾರೆ. ಕರೆ ಸ್ವೀಕರಿಸಿದ ವ್ಯಕ್ತಿ ಅಕೌಂಟ್ ನಂಬರ್ನ ಕೊನೆಯ 6 ಸಂಖ್ಯೆಗಳನ್ನು ಕೇಳಿ ಪಡೆದು, ಎರಡು ದಿನದಲ್ಲಿ ಜಮೆಯಾಗುತ್ತದೆ ಎಂದು ತಿಳಿಸಿದ್ದಾನೆ.
ಆದರೆ ಜ.11ರಂದು ಅವರ ಮೊಬೈಲ್ಗೆ ಖಾತೆಯಿಂದ ಬೇರೆ ಬ್ಯಾಂಕ್ ಖಾತೆಗೆ 99,860 ರೂ. ವರ್ಗಾವಣೆಯಾಗಿರುವ ಕುರಿತು ಬ್ಯಾಂಕ್ನಿಂದ ಮೆಸೇಜ್ಬಂದಿದೆ. ಅದರಂತೆ ಬ್ಯಾಂಕ್ನಲ್ಲಿ ದೂರು ದಾಖಲಿಸಿ, ಬಳಿಕ ಸೆನ್ ಠಾಣೆಯಲ್ಲೂ ಆನ್ಲೈನ್ಲ್ಲಿ ಹಣ ವರ್ಗಾವಣೆ ಮಾಡಿ ವಂಚಿಸಿರುವ ಕುರಿತಂತೆ ದೂರು ದಾಖಲಿಸಿದ್ದಾರೆ.
Join our Whatsapp group by clicking the below link 👇👇
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…