ಮಂಗಳೂರು: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಹಣವನ್ನು ಉಪಾಯದಿಂದ ವಂಚಕನೊಬ್ಬ ತನ್ನ ಖಾತೆಗೆ ವರ್ಗಾಯಿಸಿರುವುದಾಗಿ ವರದಿಯಾಗಿದ್ದು, ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ವ್ಯಕ್ತಿಯೊಬ್ಬರು ಯಾತ್ರಾ ಡಾಟ್ ಕಾಮ್ ಎನ್ನುವ ವೆಬ್ಸೈಟ್ನಲ್ಲಿ ಜ. 8ರಂದು 6,380 ರೂ. ಪಾವತಿ ಟಿಕೆಟ್ ಬುಕ್ ಮಾಡಿದ್ದರು. ಆದರೆ ಬಳಿಕ 99,860ರೂ. ಕಳೆದುಕೊಂಡಿದ್ದಾರೆ. ಟಿಕೆಟ್ ಬುಕ್ ಮಾಡಿದರೂ, ಟಿಕೆಟ್ ಬಾರದ ಹಿನ್ನೆಲೆಯಲ್ಲಿ ಸಂಸ್ಥೆಯವರಿಗೆ ಕರೆ ಮಾಡಿ ಹಣ ಹಿಂದಿರುಗಿರುವಂತೆ ಆಗ್ರಹಿಸಿದ್ದಾರೆ. ಕರೆ ಸ್ವೀಕರಿಸಿದ ವ್ಯಕ್ತಿ ಅಕೌಂಟ್ ನಂಬರ್ನ ಕೊನೆಯ 6 ಸಂಖ್ಯೆಗಳನ್ನು ಕೇಳಿ ಪಡೆದು, ಎರಡು ದಿನದಲ್ಲಿ ಜಮೆಯಾಗುತ್ತದೆ ಎಂದು ತಿಳಿಸಿದ್ದಾನೆ.
ಆದರೆ ಜ.11ರಂದು ಅವರ ಮೊಬೈಲ್ಗೆ ಖಾತೆಯಿಂದ ಬೇರೆ ಬ್ಯಾಂಕ್ ಖಾತೆಗೆ 99,860 ರೂ. ವರ್ಗಾವಣೆಯಾಗಿರುವ ಕುರಿತು ಬ್ಯಾಂಕ್ನಿಂದ ಮೆಸೇಜ್ಬಂದಿದೆ. ಅದರಂತೆ ಬ್ಯಾಂಕ್ನಲ್ಲಿ ದೂರು ದಾಖಲಿಸಿ, ಬಳಿಕ ಸೆನ್ ಠಾಣೆಯಲ್ಲೂ ಆನ್ಲೈನ್ಲ್ಲಿ ಹಣ ವರ್ಗಾವಣೆ ಮಾಡಿ ವಂಚಿಸಿರುವ ಕುರಿತಂತೆ ದೂರು ದಾಖಲಿಸಿದ್ದಾರೆ.
Join our Whatsapp group by clicking the below link 👇👇
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…