ಮಂಗಳೂರು: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಅಪಘಾತ – ಸವಾರ ಮೃತ್ಯು – Vishwanews24
ಮಂಗಳೂರು: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಅಪಘಾತ – ನೆಲ್ಯಾಡಿಯ ಯುವಕ ಮೃತ್ಯು
ನೆಲ್ಯಾಡಿ : ಮಂಗಳೂರಿನ ಪಂಪ್ವೆಲ್ ನಲ್ಲಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ, ಇಚ್ಚಂಪಾಡಿಯ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25ವ.) ಮೃತಪಟ್ಟ ಯುವಕ.
ಇವರು ಬೆಂದೂರ್ವೆಲ್ನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ತನ್ನ ಸ್ಕೂಟಿಯಲ್ಲಿ ರೂಮ್ ಗೆ ತೆರಳುವ ವೇಳೆ ಪಂಪ್ ವೆಲ್ ನಲ್ಲಿ ಈ ಅಪಘಾತ ಸಂಭವಿಸಿದೆ.
ಗಂಭೀರ ಗಾಯಗೊಂಡಿದ್ದ ಸಂದೇಶ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರು ಇಬ್ಬರು ಸಹೋದರರನ್ನು ಅಗಲಿದ್ದಾರೆ.
