ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಡಿವೈಎಫ್ಐ ಸಂಘಟನೆ ತನ್ನ ರಾಜ್ಯ ಸಮ್ಮೇಳನ ಪ್ರಚಾರಕ್ಕಾಗಿ ಹಾಕಿರುವ ಟಿಪ್ಪುಸುಲ್ತಾನ್ನ ಕಟೌಟ್ ತೆರವು ಮಾಡಲು ಪೊಲೀಸ್ ಇಲಾಖೆ ನೋಟೀಸ್ ನೀಡಿದೆ.
ಫೆ.25 ರಿಂದ 27 ರವರೆಗೆ ಮಂಗಳೂರಿನ ತೊಕ್ಕೊಟ್ಟುನಲ್ಲಿ ಡಿವೈಎಫ್ಐ ನ ರಾಜ್ಯ ಸಮ್ಮೇಳನ ನಡೆಯಲಿದೆ. ಇದರ ಪ್ರಚಾರಾರ್ಥವಾಗಿ ಹರೇಕಳ ಡಿವೈಎಫ್ಐ ಸಮಿತಿ ಬ್ಯಾನರ್ ಬಂಟಿಗ್ಸ್ ಹಾಕಿ 6 ಅಡಿ ಎತ್ತರದ ಟಿಪ್ಪುಸುಲ್ತಾನ್ ನ ಕಟೌಟ್ ಹಾಕಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಪರವಾನಗಿ ಪಡೆಯದೆ ಹಾಕಿರುವ ಕಟೌಟ್ ಆಗಿರೋದ್ರಿಂದ ತಕ್ಷಣ ತೆರವು ಮಾಡಬೇಕೆಂದು ಕೊಣಾಜೆ ಪೊಲೀಸರು ನೋಟೀಸ್ ನೀಡಿದ್ದಾರೆ.
ಹರೇಕಳ ಡಿವೈಎಫ್ಐ ಸಮಿತಿ ಅಧ್ಯಕ್ಷರಿಗೆ ಈ ನೋಟಿಸ್ ನೀಡಲಾಗಿದೆ. ನಾವು ಎಲ್ಲಾ ಧರ್ಮದ ದಾರ್ಶನಿಕರ ಫೋಟೋ, ಕಟೌಟ್ ಗಳನ್ನು ಹಾಕಿದ್ದು ಯಾವುದಕ್ಕೂ ಪ್ರತ್ಯೇಕ ಪರವಾಗಿ ಪಡೆದಿಲ್ಲ. ಹೀಗಾಗಿ ಟಿಪ್ಪು ಕಟೌಟನ್ನು ತೆರವುಗೊಳಿಸುವುದಿಲ್ಲ ಎಂದು ಡಿವೈಎಫ್ಐ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…