ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಡಿವೈಎಫ್ಐ ಸಂಘಟನೆ ತನ್ನ ರಾಜ್ಯ ಸಮ್ಮೇಳನ ಪ್ರಚಾರಕ್ಕಾಗಿ ಹಾಕಿರುವ ಟಿಪ್ಪುಸುಲ್ತಾನ್ನ ಕಟೌಟ್ ತೆರವು ಮಾಡಲು ಪೊಲೀಸ್ ಇಲಾಖೆ ನೋಟೀಸ್ ನೀಡಿದೆ.
ಫೆ.25 ರಿಂದ 27 ರವರೆಗೆ ಮಂಗಳೂರಿನ ತೊಕ್ಕೊಟ್ಟುನಲ್ಲಿ ಡಿವೈಎಫ್ಐ ನ ರಾಜ್ಯ ಸಮ್ಮೇಳನ ನಡೆಯಲಿದೆ. ಇದರ ಪ್ರಚಾರಾರ್ಥವಾಗಿ ಹರೇಕಳ ಡಿವೈಎಫ್ಐ ಸಮಿತಿ ಬ್ಯಾನರ್ ಬಂಟಿಗ್ಸ್ ಹಾಕಿ 6 ಅಡಿ ಎತ್ತರದ ಟಿಪ್ಪುಸುಲ್ತಾನ್ ನ ಕಟೌಟ್ ಹಾಕಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಪರವಾನಗಿ ಪಡೆಯದೆ ಹಾಕಿರುವ ಕಟೌಟ್ ಆಗಿರೋದ್ರಿಂದ ತಕ್ಷಣ ತೆರವು ಮಾಡಬೇಕೆಂದು ಕೊಣಾಜೆ ಪೊಲೀಸರು ನೋಟೀಸ್ ನೀಡಿದ್ದಾರೆ.
ಹರೇಕಳ ಡಿವೈಎಫ್ಐ ಸಮಿತಿ ಅಧ್ಯಕ್ಷರಿಗೆ ಈ ನೋಟಿಸ್ ನೀಡಲಾಗಿದೆ. ನಾವು ಎಲ್ಲಾ ಧರ್ಮದ ದಾರ್ಶನಿಕರ ಫೋಟೋ, ಕಟೌಟ್ ಗಳನ್ನು ಹಾಕಿದ್ದು ಯಾವುದಕ್ಕೂ ಪ್ರತ್ಯೇಕ ಪರವಾಗಿ ಪಡೆದಿಲ್ಲ. ಹೀಗಾಗಿ ಟಿಪ್ಪು ಕಟೌಟನ್ನು ತೆರವುಗೊಳಿಸುವುದಿಲ್ಲ ಎಂದು ಡಿವೈಎಫ್ಐ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…