Featured

ಮಂಗಳೂರು: ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್ ಟೈಂ ಜಾಬ್ ರೇಟಿಂಗ್ ಟಾಸ್ಕ್ ; ವ್ಯಕ್ತಿಗೆ 27.56 ಲಕ್ಷ ರೂ. ವಂಚನೆ – vishwanews24

ಮಂಗಳೂರು: ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್ ಟೈಂ ಜಾಬ್ ರೇಟಿಂಗ್ ಟಾಸ್ಕ್ ; ವ್ಯಕ್ತಿಗೆ 27.56 ಲಕ್ಷ ರೂ. ವಂಚನೆ

ಮಂಗಳೂರು : ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್ ಟೈಂ ಜಾಬ್ ಎಂದು ರೇಟಿಂಗ್ ನೀಡುವ ಟಾಸ್ಕ್ ನೀಡಿ ವ್ಯಕ್ತಿಯೊರ್ವರಿಗೆ 27.56 ಲಕ್ಷ ರೂ. ವಂಚನೆ ಮಾಡಿರುವ ಘಟನೆ ನಡೆದಿದೆ.

ಜೂ.19ರಂದು ದೂರುದಾರರಿಗೆ ಟೆಲಿಗ್ರಾಂನಲ್ಲಿ ಹೊಟೇಲ್ ಮತ್ತು ಹೋಮ್ ಸ್ಟೇಗಳಿಗೆ ರೇಟಿಂಗ್ ನೀಡುವ ಟಾಸ್ಕ್ ಪೂರ್ಣಗೊಳಿಸುವ ಪಾರ್ಟ್ ಟೈಂ ಜಾಬ್ ಮಾಡಿ ಹಣ ಗಳಿಸಬಹುದೆಂದು ಅಪರಿಚಿತ ವ್ಯಕ್ತಿಯೋರ್ವನಿಂದ ಸಂದೇಶ ಬಂದಿತ್ತು ಎನ್ನಲಾಗಿದೆ.

ಅಪರಿಚಿತ ವ್ಯಕ್ತಿಯ ಸಂದೇಶವನ್ನು ನಂಬಿದ ದೂರುದಾರರು ‘ಅಧಿತಿ ಎಮ್ ಎಮ್ ಟಿ’ ಎಂಬ ಗ್ರೂಪ್ ನಲ್ಲಿ 30 ಟಾಸ್ಕ್ ಪೂರ್ಣಗೊಳಿಸಿದ್ದರು. ಇದಕ್ಕಾಗಿ ಆ ವ್ಯಕ್ತಿ ಲಾಭಾಂಶವೆಂದು 900 ರೂ. ನೀಡಿದ್ದ. ಮತ್ತದೇ ದಿನ ದೂರುದಾರಿಂದ ಪುನಃ 11 ಸಾವಿರ ರೂ. ಹೂಡಿಕೆ ಮಾಡಿಸಿದ ವಂಚಕ ಒಮ್ಮೆ 20 ಸಾವಿರ ಹಾಗೂ ಮತ್ತೊಮ್ಮೆ 70 ಸಾವಿರ ರೂ. ಗಳನ್ನು ಲಾಭಾಂಶವೆಂದು ನೀಡಿರುತ್ತಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದೇ ರೀತಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚು ಲಾಭಾಂಶ ನೀಡುವುದಾಗಿ ವಂಚಕ ನಂಬಿಸಿದ್ದಾನೆ. ಅದರಂತೆ ಜೂ.19ರಿಂದ ಆ.26ರವರೆಗೆ ಹಂತಹಂತ ವಾಗಿ ಒಟ್ಟು 27,56,129 ರೂ.ಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡ ಆತ ಯಾವುದೇ ಲಾಭಾಂಶ ನೀಡದೇ ವಂಚಿಸಿರುತ್ತಾನೆ. ಈ ಬಗ್ಗೆ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago