Featured

ಮಂಗಳೂರು: ಟ್ರಾಯ್‌ನಿಂದ ಕರೆ ಮಾಡಿರುವುದಾಗಿ ತಿಳಿಸಿ 1.71 ಕೋ.ರೂ ವಂಚನೆ; ಪ್ರಕರಣ ದಾಖಲು – vishwanews24

ಮಂಗಳೂರು: ಟ್ರಾಯ್‌ನಿಂದ ಕರೆ ಮಾಡಿರುವುದಾಗಿ ತಿಳಿಸಿ, 1.71 ಕೋ.ರೂ ವಂಚನೆ; ಪ್ರಕರಣ ದಾಖಲು

ಮಂಗಳೂರು: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ 1.71 ಕೋ.ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ. 11ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿಯೋರ್ವ ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ. ಮುಂಬೈನ ಅಂಧೇರಿ (ಪೂ)ದಲ್ಲಿ ಅದರ ಮೂಲಕ ಹಲವು ಕಾನೂನು ಬಾಹಿರ ಚಟುವಟಿಕೆ ನಡೆದಿವೆ. ಮಾರ್ಕೆಟಿಂಗ್ ನೆಪದಲ್ಲಿ ಆ ಮೊಬೈಲ್ ನಂಬರ್‌ನಿಂದ ಕರೆ ಮಾಡಿ ಕಿರುಕುಳ ನೀಡುತ್ತಿರುವ ಬಗ್ಗೆ ಎಫ್‌ಐಆರ್ ದಾಖಲಾಗಿದೆ. ಕೂಡಲೇ ಅಂಧೇರಿ ಪೂರ್ವ ಠಾಣೆಯನ್ನು ಸಂಪರ್ಕಿಸಬೇಕು. ಇಲ್ಲವಾದಲ್ಲಿ ನಿಮ್ಮ ಮೊಬೈಲ್ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುವುದು ಎಂದು ಎಚ್ಚರಿಸಿದ್ದ.

ಬಳಿಕ ದೂರುದಾರರು ಅಪರಿಚತ ವ್ಯಕ್ತಿ ಪ್ರದೀಪ್ ಸಾವಂತ್ ಎಂಬಾತನಲ್ಲಿ ಮಾತನಾಡಿದ್ದು, ನರೇಶ್ ಗೋಯೆಲ್ ವಂಚನೆ ಪ್ರಕರಣವನ್ನು ಒಳಗೊಂಡಿರುವ ಮನಿ ಲ್ಯಾಂಡರಿಂಗ್ ಯೋಜನೆಯಲ್ಲಿ ಭಾಗಿಯಾಗಿರುವುದರಿಂದ ಇನ್ನೊಂದು ಎಫ್‌ಐಆರ್ ದಾಖಲಾಗಿದೆ. ಅಂಧೇರಿಯ ಬ್ಯಾಂಕ್‌ನ ಹೆಸರಿನಲ್ಲಿ ಖಾತೆ ತೆರೆದು ವಂಚನೆಗೆ ಬಳಸಲಾಗಿದ್ದು, ಅದಕ್ಕೆ ಐಡೆಂಟಿಟಿ ಬಳಸಿ ಸಿಮ್ ಖರೀದಿಸಲಾಗಿದೆ. ಹೀಗಾಗಿ ನಿಮ್ಮನ್ನು ಬಂಧಿಸಲಾಗುತ್ತದೆ ಎಂದು ಹೇಳಿದ್ದ.

ಬಳಿಕ ರಾಹುಲ್ ಕುಮಾರ್ ಎಂಬಾತ ಪೊಲೀಸ್ ಅಧಿಕಾರಿ ಮತ್ತು ಆಕಾಂಕ್ಷ ಎಂಬ ಮಹಿಳೆ ಸಿಬಿಐ ಅಧಿಕಾರಿಯೆಂದು ಹೇಳಿಕೊಂಡು ವಾಟ್ಸಾಪ್ ನಲ್ಲಿ ವೀಡಿಯೋ ಕರೆ ಮಾಡಿದ್ದಾರೆ. ಆಕಾಂಕ್ಷ ಎಂಬಾಕೆ ಸಿಬಿಐ ಕಚೇರಿಯ ನಕಲಿ ದಾಖಲೆ ಸೃಷ್ಟಿಸಿ ದೂರುದಾರರ ವಾಟ್ಸಾಪ್ ನಂಬರ್‌ಗೆ ಕಳುಹಿಸಿದ್ದಳು. ಈ ಪ್ರಕರಣದಿಂದ ಹೊರಬರಬೇಕಾದರೆ ಹಣ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಳು. ಅದರಂತೆ ದೂರುದಾರರು ನ. 13ರಿಂದ 19ರ ನಡುವೆ 53 ಲಕ್ಷ ರೂ., 74 ಲಕ್ಷ ರೂ., 44 ಲಕ್ಷ ರೂ. ಹೀಗೆ ಒಟ್ಟು 1.71 ಕೋ.ರೂ. ವರ್ಗಾಯಿಸಿದ್ದರು. ಇನ್ನು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೂರುದಾರರು ಮೂಲತಃ ಮುಂಬೈಯವರಾಗಿದ್ದು, ಈ ಮೊದಲು ಅಮೇರಿಕದ ಐಟಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಅಲ್ಲಿಂದ ಮರಳಿದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿಸಿ ವಾಸವಾಗಿದ್ದರು. ಅವಿವಾಹಿತರಾಗಿರುವ ಅವರು ಒಬ್ಬರೇ ಇದ್ದರು. ಅಮೇರಿಕಾದಲ್ಲಿ ಉದ್ಯೋಗ ಮಾಡಿ ಉಳಿತಾಯ ಮಾಡಿದ ಹಣವನ್ನು ಈ ಮೂಲಕ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

3 hours ago