ಮಂಗಳೂರು: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ 1.71 ಕೋ.ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ. 11ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿಯೋರ್ವ ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ. ಮುಂಬೈನ ಅಂಧೇರಿ (ಪೂ)ದಲ್ಲಿ ಅದರ ಮೂಲಕ ಹಲವು ಕಾನೂನು ಬಾಹಿರ ಚಟುವಟಿಕೆ ನಡೆದಿವೆ. ಮಾರ್ಕೆಟಿಂಗ್ ನೆಪದಲ್ಲಿ ಆ ಮೊಬೈಲ್ ನಂಬರ್ನಿಂದ ಕರೆ ಮಾಡಿ ಕಿರುಕುಳ ನೀಡುತ್ತಿರುವ ಬಗ್ಗೆ ಎಫ್ಐಆರ್ ದಾಖಲಾಗಿದೆ. ಕೂಡಲೇ ಅಂಧೇರಿ ಪೂರ್ವ ಠಾಣೆಯನ್ನು ಸಂಪರ್ಕಿಸಬೇಕು. ಇಲ್ಲವಾದಲ್ಲಿ ನಿಮ್ಮ ಮೊಬೈಲ್ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುವುದು ಎಂದು ಎಚ್ಚರಿಸಿದ್ದ.
ಬಳಿಕ ದೂರುದಾರರು ಅಪರಿಚತ ವ್ಯಕ್ತಿ ಪ್ರದೀಪ್ ಸಾವಂತ್ ಎಂಬಾತನಲ್ಲಿ ಮಾತನಾಡಿದ್ದು, ನರೇಶ್ ಗೋಯೆಲ್ ವಂಚನೆ ಪ್ರಕರಣವನ್ನು ಒಳಗೊಂಡಿರುವ ಮನಿ ಲ್ಯಾಂಡರಿಂಗ್ ಯೋಜನೆಯಲ್ಲಿ ಭಾಗಿಯಾಗಿರುವುದರಿಂದ ಇನ್ನೊಂದು ಎಫ್ಐಆರ್ ದಾಖಲಾಗಿದೆ. ಅಂಧೇರಿಯ ಬ್ಯಾಂಕ್ನ ಹೆಸರಿನಲ್ಲಿ ಖಾತೆ ತೆರೆದು ವಂಚನೆಗೆ ಬಳಸಲಾಗಿದ್ದು, ಅದಕ್ಕೆ ಐಡೆಂಟಿಟಿ ಬಳಸಿ ಸಿಮ್ ಖರೀದಿಸಲಾಗಿದೆ. ಹೀಗಾಗಿ ನಿಮ್ಮನ್ನು ಬಂಧಿಸಲಾಗುತ್ತದೆ ಎಂದು ಹೇಳಿದ್ದ.
ಬಳಿಕ ರಾಹುಲ್ ಕುಮಾರ್ ಎಂಬಾತ ಪೊಲೀಸ್ ಅಧಿಕಾರಿ ಮತ್ತು ಆಕಾಂಕ್ಷ ಎಂಬ ಮಹಿಳೆ ಸಿಬಿಐ ಅಧಿಕಾರಿಯೆಂದು ಹೇಳಿಕೊಂಡು ವಾಟ್ಸಾಪ್ ನಲ್ಲಿ ವೀಡಿಯೋ ಕರೆ ಮಾಡಿದ್ದಾರೆ. ಆಕಾಂಕ್ಷ ಎಂಬಾಕೆ ಸಿಬಿಐ ಕಚೇರಿಯ ನಕಲಿ ದಾಖಲೆ ಸೃಷ್ಟಿಸಿ ದೂರುದಾರರ ವಾಟ್ಸಾಪ್ ನಂಬರ್ಗೆ ಕಳುಹಿಸಿದ್ದಳು. ಈ ಪ್ರಕರಣದಿಂದ ಹೊರಬರಬೇಕಾದರೆ ಹಣ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಳು. ಅದರಂತೆ ದೂರುದಾರರು ನ. 13ರಿಂದ 19ರ ನಡುವೆ 53 ಲಕ್ಷ ರೂ., 74 ಲಕ್ಷ ರೂ., 44 ಲಕ್ಷ ರೂ. ಹೀಗೆ ಒಟ್ಟು 1.71 ಕೋ.ರೂ. ವರ್ಗಾಯಿಸಿದ್ದರು. ಇನ್ನು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದೂರುದಾರರು ಮೂಲತಃ ಮುಂಬೈಯವರಾಗಿದ್ದು, ಈ ಮೊದಲು ಅಮೇರಿಕದ ಐಟಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಅಲ್ಲಿಂದ ಮರಳಿದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿಸಿ ವಾಸವಾಗಿದ್ದರು. ಅವಿವಾಹಿತರಾಗಿರುವ ಅವರು ಒಬ್ಬರೇ ಇದ್ದರು. ಅಮೇರಿಕಾದಲ್ಲಿ ಉದ್ಯೋಗ ಮಾಡಿ ಉಳಿತಾಯ ಮಾಡಿದ ಹಣವನ್ನು ಈ ಮೂಲಕ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…