Featured

ಮಂಗಳೂರು: ಟ್ರಾಯ್‌ನಿಂದ ಕರೆ ಮಾಡಿರುವುದಾಗಿ ತಿಳಿಸಿ 1.71 ಕೋ.ರೂ ವಂಚನೆ; ಪ್ರಕರಣ ದಾಖಲು – vishwanews24

ಮಂಗಳೂರು: ಟ್ರಾಯ್‌ನಿಂದ ಕರೆ ಮಾಡಿರುವುದಾಗಿ ತಿಳಿಸಿ, 1.71 ಕೋ.ರೂ ವಂಚನೆ; ಪ್ರಕರಣ ದಾಖಲು

ಮಂಗಳೂರು: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ 1.71 ಕೋ.ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ. 11ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿಯೋರ್ವ ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ. ಮುಂಬೈನ ಅಂಧೇರಿ (ಪೂ)ದಲ್ಲಿ ಅದರ ಮೂಲಕ ಹಲವು ಕಾನೂನು ಬಾಹಿರ ಚಟುವಟಿಕೆ ನಡೆದಿವೆ. ಮಾರ್ಕೆಟಿಂಗ್ ನೆಪದಲ್ಲಿ ಆ ಮೊಬೈಲ್ ನಂಬರ್‌ನಿಂದ ಕರೆ ಮಾಡಿ ಕಿರುಕುಳ ನೀಡುತ್ತಿರುವ ಬಗ್ಗೆ ಎಫ್‌ಐಆರ್ ದಾಖಲಾಗಿದೆ. ಕೂಡಲೇ ಅಂಧೇರಿ ಪೂರ್ವ ಠಾಣೆಯನ್ನು ಸಂಪರ್ಕಿಸಬೇಕು. ಇಲ್ಲವಾದಲ್ಲಿ ನಿಮ್ಮ ಮೊಬೈಲ್ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುವುದು ಎಂದು ಎಚ್ಚರಿಸಿದ್ದ.

ಬಳಿಕ ದೂರುದಾರರು ಅಪರಿಚತ ವ್ಯಕ್ತಿ ಪ್ರದೀಪ್ ಸಾವಂತ್ ಎಂಬಾತನಲ್ಲಿ ಮಾತನಾಡಿದ್ದು, ನರೇಶ್ ಗೋಯೆಲ್ ವಂಚನೆ ಪ್ರಕರಣವನ್ನು ಒಳಗೊಂಡಿರುವ ಮನಿ ಲ್ಯಾಂಡರಿಂಗ್ ಯೋಜನೆಯಲ್ಲಿ ಭಾಗಿಯಾಗಿರುವುದರಿಂದ ಇನ್ನೊಂದು ಎಫ್‌ಐಆರ್ ದಾಖಲಾಗಿದೆ. ಅಂಧೇರಿಯ ಬ್ಯಾಂಕ್‌ನ ಹೆಸರಿನಲ್ಲಿ ಖಾತೆ ತೆರೆದು ವಂಚನೆಗೆ ಬಳಸಲಾಗಿದ್ದು, ಅದಕ್ಕೆ ಐಡೆಂಟಿಟಿ ಬಳಸಿ ಸಿಮ್ ಖರೀದಿಸಲಾಗಿದೆ. ಹೀಗಾಗಿ ನಿಮ್ಮನ್ನು ಬಂಧಿಸಲಾಗುತ್ತದೆ ಎಂದು ಹೇಳಿದ್ದ.

ಬಳಿಕ ರಾಹುಲ್ ಕುಮಾರ್ ಎಂಬಾತ ಪೊಲೀಸ್ ಅಧಿಕಾರಿ ಮತ್ತು ಆಕಾಂಕ್ಷ ಎಂಬ ಮಹಿಳೆ ಸಿಬಿಐ ಅಧಿಕಾರಿಯೆಂದು ಹೇಳಿಕೊಂಡು ವಾಟ್ಸಾಪ್ ನಲ್ಲಿ ವೀಡಿಯೋ ಕರೆ ಮಾಡಿದ್ದಾರೆ. ಆಕಾಂಕ್ಷ ಎಂಬಾಕೆ ಸಿಬಿಐ ಕಚೇರಿಯ ನಕಲಿ ದಾಖಲೆ ಸೃಷ್ಟಿಸಿ ದೂರುದಾರರ ವಾಟ್ಸಾಪ್ ನಂಬರ್‌ಗೆ ಕಳುಹಿಸಿದ್ದಳು. ಈ ಪ್ರಕರಣದಿಂದ ಹೊರಬರಬೇಕಾದರೆ ಹಣ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಳು. ಅದರಂತೆ ದೂರುದಾರರು ನ. 13ರಿಂದ 19ರ ನಡುವೆ 53 ಲಕ್ಷ ರೂ., 74 ಲಕ್ಷ ರೂ., 44 ಲಕ್ಷ ರೂ. ಹೀಗೆ ಒಟ್ಟು 1.71 ಕೋ.ರೂ. ವರ್ಗಾಯಿಸಿದ್ದರು. ಇನ್ನು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೂರುದಾರರು ಮೂಲತಃ ಮುಂಬೈಯವರಾಗಿದ್ದು, ಈ ಮೊದಲು ಅಮೇರಿಕದ ಐಟಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಅಲ್ಲಿಂದ ಮರಳಿದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿಸಿ ವಾಸವಾಗಿದ್ದರು. ಅವಿವಾಹಿತರಾಗಿರುವ ಅವರು ಒಬ್ಬರೇ ಇದ್ದರು. ಅಮೇರಿಕಾದಲ್ಲಿ ಉದ್ಯೋಗ ಮಾಡಿ ಉಳಿತಾಯ ಮಾಡಿದ ಹಣವನ್ನು ಈ ಮೂಲಕ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

16 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

16 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

16 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

19 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

20 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

20 hours ago