ಮಂಗಳೂರು: ಮಂಗಳೂರು ಟ್ರಾಫಿಕ್ ಪೊಲೀಸ್, ಆರ್ಟಿಓ ಅಧಿಕಾರಿಗಳ ನಿರ್ದೇಶನದಂತೆ ನಗರದ ಎಲ್ಲಾ ಖಾಸಗಿ ಬಸ್ಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಸ್ಟಿಕ್ಕರ್ ಅಳವಡಿಸಿದ್ದಾರೆ.
ಸಾಕಷ್ಟು ವರ್ಷಗಳ ಹಿಂದೆಯೇ ಜ್ಯೋತಿ ಸಿನಿಮಾ ಟಾಕೀಸ್ ಬಳಿಯ ವೃತ್ತಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತವೆಂದು ನಾಮಕರಣ ಮಾಡಲಾಗಿದ್ದರೂ, ಬಸ್ ಗಳಲ್ಲಿ ಈಗಲೂ ‘ಜ್ಯೋತಿ’ ಎಂಬ ಸ್ಟಿಕ್ಕರ್ ಅಳವಡಿಕೆ ಮಾಡಲಾಗಿತ್ತು.
ಇದನ್ನೂ ಓದಿ : ಮಂಗಳೂರು: ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢ , ಕಾಲೇಜ್ ಸೀಲ್ಡೌನ್ -Vishwanews24
ಇತ್ತೀಚೆಗೆ ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಎಸ್ಸಿ- ಎಸ್ಟಿ ಕುಂದುಕೊರತೆಗಳ ಸಭೆಯಲ್ಲಿ ಈ ಬಗ್ಗೆ ದೂರು ಕೇಳಿ ಬಂದಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಡಿಸಿಪಿ ಹರಿರಾಂ ಶಂಕರ್, ಮುಂದಿನ ಕುಂದುಕೊರತೆ ಸಭೆಯೊಳಗೆ ಇದನ್ನು ಸರಿಪಡಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು.
ಇದೀಗ ಮಂಗಳೂರು ನಗರ ಸಂಚಾರ ಪೊಲೀಸ್, ಖಾಸಗಿ ಬಸ್ ಅಸೋಸಿಯೇಶನ್, ಆರ್ಟಿಒ ಮತ್ತು ಡಿಎಸ್ಎಸ್ ಸೇರಿದಂತೆ ವಿವಿಧ ಎಸ್ಸಿ- ಎಸ್ಟಿ ಸಂಘಟನೆಗಳ ಜಂಟಿ ಪ್ರಯತ್ನದಿಂದ ನಗರದ ಎಲ್ಲ ಬಸ್ಗಳಲ್ಲಿ ಅಂಬೇಡ್ಕರ್ ಸರ್ಕಲ್ ಸ್ಟಿಕ್ಕರ್ಗಳನ್ನು ಅಳವಡಿಕೆ ಮಾಡಲಾಗಿದೆ.
ಇದನ್ನೂ ಓದಿ : ಮಣಿಪಾಲ : MIT ಕಾಲೇಜಿನಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ ದೃಢ ; ಕಾಲೇಜು ಕ್ಯಾಂಪಸ್ ಈಗ ಕಂಟೇನ್ಮೆಂಟ್ ಜೋನ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…