ಮಂಗಳೂರು : ಡಿಸಿಪಿ ಕಾರಿನ ಮೇಲೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಹತ್ತಿಸಲು ಪ್ರಯತ್ನಿಸಿರುವ ಘಟನೆ ಪರಂಗಿಪೇಟೆ ಔಟ್ಪೋಸ್ಟ್ನಲ್ಲಿ ನಡೆದಿದ್ದು, ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಮಧ್ಯರಾತ್ರಿ ವೇಳೆ ದಾಳಿ ನಡೆಸಿದ್ದ ಡಿಸಿಪಿ ಹರಿರಾಮ್ ಶಂಕರ್ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಬೆನ್ನಟ್ಟಿ, ಪರಂಗಿಪೇಟೆ ಔಟ್ ಪೋಸ್ಟ್ ಬಳಿ ಲಾರಿ ಅಡ್ಡಗಟ್ಟಿದ್ದರು. ಈ ವೇಳೆ ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಚಾಲಕ ಪ್ರಯತ್ನಿಸಿದ್ದ. ಬಳಿಕ ಔಟ್ಪೋಸ್ಟ್ನ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದ.
ಮತ್ತೆ ಮರಳು ಸಾಗಣೆ ಲಾರಿ ಹಿಂಬಾಲಿಸಿದ್ದ ಡಿಸಿಪಿ ಹರಿರಾಮ್ ಸೂಚನೆಯಂತೆ ಪೊಲೀಸರು ಬಂಟ್ವಾಳದಲ್ಲಿ ಮರಳು ಲಾರಿ ವಶಕ್ಕೆ ಪಡೆದರು. ಲಾರಿ ಚಾಲಕ ಮತ್ತು ಲಾರಿಯನ್ನು ಹಿಂಬಾಲಿಸುತ್ತಿದ್ದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದರು.
ಆರೋಪಿಗಳ ವಿರುದ್ಧ ಮರಳು ಕಳವು, ನಿರ್ಲಕ್ಷ್ಯದ ಚಾಲನೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…