ಮಂಗಳೂರು : ಡಿಸಿಪಿ ಕಾರಿನ ಮೇಲೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಹತ್ತಿಸಲು ಪ್ರಯತ್ನಿಸಿರುವ ಘಟನೆ ಪರಂಗಿಪೇಟೆ ಔಟ್ಪೋಸ್ಟ್ನಲ್ಲಿ ನಡೆದಿದ್ದು, ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಮಧ್ಯರಾತ್ರಿ ವೇಳೆ ದಾಳಿ ನಡೆಸಿದ್ದ ಡಿಸಿಪಿ ಹರಿರಾಮ್ ಶಂಕರ್ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಬೆನ್ನಟ್ಟಿ, ಪರಂಗಿಪೇಟೆ ಔಟ್ ಪೋಸ್ಟ್ ಬಳಿ ಲಾರಿ ಅಡ್ಡಗಟ್ಟಿದ್ದರು. ಈ ವೇಳೆ ಡಿಸಿಪಿ ಕಾರಿನ ಮೇಲೆ ಲಾರಿ ಹತ್ತಿಸಲು ಚಾಲಕ ಪ್ರಯತ್ನಿಸಿದ್ದ. ಬಳಿಕ ಔಟ್ಪೋಸ್ಟ್ನ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದ.
ಮತ್ತೆ ಮರಳು ಸಾಗಣೆ ಲಾರಿ ಹಿಂಬಾಲಿಸಿದ್ದ ಡಿಸಿಪಿ ಹರಿರಾಮ್ ಸೂಚನೆಯಂತೆ ಪೊಲೀಸರು ಬಂಟ್ವಾಳದಲ್ಲಿ ಮರಳು ಲಾರಿ ವಶಕ್ಕೆ ಪಡೆದರು. ಲಾರಿ ಚಾಲಕ ಮತ್ತು ಲಾರಿಯನ್ನು ಹಿಂಬಾಲಿಸುತ್ತಿದ್ದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದರು.
ಆರೋಪಿಗಳ ವಿರುದ್ಧ ಮರಳು ಕಳವು, ನಿರ್ಲಕ್ಷ್ಯದ ಚಾಲನೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…