ಮಂಗಳೂರು: ಮಂಗಳೂರು-ಮುಂಬೈ ನಡುವಿನ ಮತ್ಸ್ಯಗಂಧ ರೈಲು ಡಿ.17ರಂದು ಸಂಚಾರ ಆರಂಭಿಸಲಿದೆ. ಕೊರೊನಾ ಹಿನ್ನೆಲೆ ಸ್ಥಗಿತಗೊಂಡಿದ್ದ ರೈಲಿನ ಸಂಚಾರ ಪುನರಾರಂಭಕ್ಕೆ ರೈಲ್ವೆ ಮಂಡಳಿ ಒಪ್ಪಿಗೆ ಸೂಚಿಸಿದೆ.
ಮಂಗಳೂರು – ಲೋಕಮಾನ್ಯ ತಿಲಕ್ ಎಕ್ಸ್ಪ್ರೆಸ್ ರೈಲು ಪ್ರಾರಂಭಿಸಲು ರೈಲ್ವೆ ಮಂಡಳಿ ಅನುಮತಿ ನೀಡಿರುವುದರಿಂದ, ದಕ್ಷಿಣ ರೈಲ್ವೆ, 15 ದಿನಗಳ ಕಾಲ ಉತ್ಸವ ರೈಲು ರೂಪದಲ್ಲಿ ರೈಲು ಚಲಾಯಿಸಲು ನಿರ್ಧರಿಸಿದೆ.
ನಂ. 02620 ಮಂಗಳೂರು ಸೆಂಟ್ರಲ್ – ಎಲ್ಟಿಟಿ ರೈಲು ಮತ್ತು ನಂ. 02619 ಎಲ್ಟಿಟಿ – ಮಂಗಳೂರು ಸೆಂಟ್ರಲ್ ರೈಲು ಡಿಸೆಂಬರ್ 17 ರಿಂದ 31ರವರೆಗೆ ಚಲಿಸಲಿದೆ. ಎರಡೂ ರೈಲುಗಳು ತಲಾ 15 ಟ್ರಿಪ್ಗಳನ್ನು ಕೈಗೊಳ್ಳಲಿವೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.
02620ರ ರೈಲು ಮಧ್ಯಾಹ್ನ 2.25 ಕ್ಕೆ ಸೆಂಟ್ರಲ್ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 6.35 ಕ್ಕೆ ಎಲ್ಟಿಟಿಯನ್ನು ತಲುಪುತ್ತದೆ. ರೈಲು ನಂ. 02619 ಮಧ್ಯಾಹ್ನ 3.20 ಕ್ಕೆ ಎಲ್ಟಿಟಿಯಿಂದ ಹೊರಟು ಬೆಳಿಗ್ಗೆ 7.30 ಕ್ಕೆ ಮಂಗಳೂರು ಸೆಂಟ್ರಲ್ಗೆ ತಲುಪಲಿದೆ. ಈ ರೈಲು ಸುರತ್ಕಲ್, ಮುಲ್ಕಿ, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲ, ಕಾರವಾರ, ಮಡಗಾಂವ್, ಕುಡಾಳ್, ರತ್ನಗಿರಿ, ಚಿಪ್ಲುನ್, ಖೇಡ್, ಮನಗಾಂವ್ ಹಾಗೂ ಪನ್ವೆಲ್ ಥಾಣೆಗಳನ್ನು ನಿಲುಗಡೆ ಹೊಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…