Featured

ಮಂಗಳೂರು : ಡಿ.20 ರಿಂದ ಜ.4ರವರೆಗೆ ‘ಕರಾವಳಿ ಉತ್ಸವ 2025-26’ – vishwanews24

ಮಂಗಳೂರು : ಡಿ.20 ರಿಂದ ಜ.4ರವರೆಗೆ ‘ಕರಾವಳಿ ಉತ್ಸವ 2025-26’

ಮಂಗಳೂರು: ದ.ಕ. ಜಿಲ್ಲಾಡಳಿತವು, ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ, ಸಾಂಸ್ಕೃತಿಕ, ಕ್ರೀಡಾ ಮತ್ತು ಮನರಂಜನಾ ಚಟುವಟಿಕೆಗಳ ಸಮಾಗಮವಾದ ‘ಕರಾವಳಿ ಉತ್ಸವ 2025-26’ ಅನ್ನು ಡಿ.20ರಿಂದ ಜ.4ರವರೆಗೆ ಆಯೋಜಿಸಲು ಸಜ್ಜಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕರಾವಳಿ ಉತ್ಸವ ಮೈದಾನ, ಕದ್ರಿ ಪಾರ್ಕ್ ಮತ್ತು ನಗರದ ಕಡಲತೀರಗಳಲ್ಲಿ ವಿಜೃಂಭಣೆಯಿಂದ ಜರುಗಲಿದೆ ಎಂದು ಅವರು ಹೇಳಿದರು. ಡಿ.20ರಂದು ಸಭಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ನ ಶಾಸಕರು, ವಿವಿಧ ಅಕಾಡಮಿ, ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ವಿವರಿಸಿದರು.

ಕರಾವಳಿ ಉತ್ಸವ ಮೈದಾನದಲ್ಲಿ ವಿವಿಧ ಮಳಿಗೆಗಳು, ಪ್ರದರ್ಶನಗಳು ಮತ್ತು ಅಮ್ಯೂಸ್ಮೆಂಟ್ ಪಾರ್ಕ್ ಸಾರ್ವಜನಿಕರಿಗಾಗಿ ಲಭ್ಯವಿರಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು: ಡಿ.20ರಿಂದ ಜ.4ರವರೆಗೆ ಪ್ರತೀ ಶನಿವಾರ ಮತ್ತು ರವಿವಾರ ಕರಾವಳಿ ಉತ್ಸವ ಮೈದಾನದ ವೇದಿಕೆಯಲ್ಲಿ ಕರಾವಳಿಯ ಕಲೆ ಮತ್ತು ಸಾಂಸ್ಕೃತಿಕ ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಜ.3 ಮತ್ತು 4ರಂದು ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಕಡಲತೀರಗಳಲ್ಲಿ ಸ್ಯಾಂಡಲ್ ವುಡ್ ಹಾಗೂ ಬಾಲಿವುಡ್ ಖ್ಯಾತ ಕಲಾವಿದರಿಂದ ‘ಮ್ಯೂಸಿಕಲ್ ನೈಟ್’ ಕಾರ್ಯಕ್ರಮ ನಡೆಯಲಿದೆ.

ಉತ್ಸವದ ಮುಂದುವರಿದ ಭಾಗವಾಗಿ, ಜನವರಿ ಮತ್ತು ಫೆಬ್ರವರಿಯಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ ಎಂದು ಡಿಸಿ ದರ್ಶನ್ ಎಚ್.ವಿ. ತಿಳಿಸಿದರು. ಜ.9ರಿಂದ 11ರವರೆಗೆ ಕಲೆ ಮತ್ತು ಸಂಸ್ಕೃತಿಯ ಅಂಗವಾಗಿ ಕದ್ರಿ ಪಾರ್ಕ್ ರಸ್ತೆಯಲ್ಲಿ ಶರಧಿ ಪ್ರತಿಷ್ಠಾನದ ಸಹಯೋಗದೊಂದಿಗೆ ಚಿತ್ರ ಶಿಲ್ಪನೃತ್ಯ ಮೇಳ ‘ಕಲಾ ಪರ್ಬ’ ನಡೆಯಲಿದೆ. ಕದ್ರಿ ಪಾರ್ಕ್ (ತೋಟಗಾರಿಕೆ ಇಲಾಖೆ) ವತಿಯಿಂದ ಜ.26ರಂದು ಫಲಪುಷ್ಪಪ್ರದರ್ಶನ ನಡೆಯಲಿದೆ. ಕ್ರೀಡೆ ಸಂಬಂಧಿಸಿದಂತೆ ಟ್ರಯತ್ಲಾನ್ ಜ.9ರಿಂದ 11ರವರೆಗೆ ತಣ್ಣೀರುಬಾವಿ ಬೀಚ್ (ತಪಸ್ಯಾ ಫೌಂಡೇಶನ್ ಸಹಯೋಗ)ನಲ್ಲಿ ನಡೆಯಲಿದೆ.

ಜ.17, 18ರಂದು ತಣ್ಣೀರು ಬಾವಿ ಬೀಚ್ನಲ್ಲಿ ಅಂತರ್ರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ. ಜ.23ರಿಂದ 25ರವರೆಗೆ ಪ್ರಮುಖ ಬೀಚ್ಗಳಲ್ಲಿ ಬೀಚ್ ಉತ್ಸವ ನಡೆಯಲಿದೆ. ಜ.30 ಮತ್ತು 31ರಂದು ಕದ್ರಿ ಪಾರ್ಕ್ ರೋಡ್ ಬಳಿ ಫುಡ್ ಸ್ಟ್ರೀಟ್ನಡೆಯಲಿದೆ. ಜನವರಿ ಕೊನೆಯ ವಾರ ನಗರ ಕೇಂದ್ರ ಗ್ರಂಥಾಲಯದಲ್ಲಿ ಪುಸ್ತಕ ಮೇಳ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಸಿಇಒ ಡಾ.ನಾರ್ವಡೆ ವಿನಾಯಕ ಕರ್ಬಾರಿ ಡಿಸಿಪಿ ಮಿಥುನ್ ಎಚ್.ಎನ್. ಉಪಸ್ಥಿತರಿದ್ದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

6 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

6 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

6 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

7 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

7 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

7 hours ago