ಮಂಗಳೂರು: ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಡ್ರಗ್ಸ್ ಮಾರಾಟ ಪ್ರಕರಣದಲ್ಲಿ ಬೆಂಗಳೂರಿನಲ್ಲಿ ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಬಂಧಿತ ನೈಜೀರಿಯಾ ಪ್ರಜೆಗಳನ್ನು ಪೌಲ್ ಒಹಮೋಬಿ ಮತ್ತು ಉಚೆಚುಕು ಮಲಾಕಿ ಎಲಕ್ವಾಚಿ ಎಂದು ಗುರುತಿಸಲಾಗಿದೆ. ಇವರಿಬ್ಬರನ್ನೂ ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಜೂ.3ರಂದು ಮನಾಫ್, ಮುಝಾಂಬಿಲ್, ಅಹಮ್ಮದ್ ಮಸೂಕ್ ಎಂಬವರನ್ನು ವಶಕ್ಕೆ ಪಡೆದು 170 ಗ್ರಾಂ ಎಂ.ಡಿ.ಎಂ.ಎಂ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು. ಜೂ.13ರಂದು ಉಪ್ಪಳ ನಿವಾಸಿಗಳಾಸ ಶಫೀಕ್ ಕೆ.ಎಸ್. ಮತ್ತು ಅಲ್ತಾಫ್ ರನ್ನು ವಶಕ್ಕೆ ಪಡೆದು 65 ಗ್ರಾಂ ಎಂ.ಡಿ.ಎಂ.ಎಂ ಡ್ರಗ್ಸ್ ವಶಕ್ಕೆ ಪಡೆಲಾಗಿತ್ತು. ವಿಚಾರಣೆ ಸಂದರ್ಭ ತಮಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಸ್ಟ್ಯಾನ್ಲಿ ಚಿಮಾ ಮತ್ತು ಉಪ್ಪಳದ ರಮೀಜ್ ಬಗ್ಗೆ ಮಾಹಿತಿ ನೀಡಿದ್ದು ಅವರನ್ನು ಬಂಧಿಸಲಾಗಿತ್ತು.
ಸ್ಟ್ಯಾನ್ಲಿ ಮತ್ತು ರಮೀಜ್ ನನ್ನು ವಿಚಾರಣೆ ಮಾಡಿದಾಗ ಬೆಂಗಳೂರಿನಲ್ಲಿರುವ ನೈಜೀರಿಯಾ ಮೂಲದ ಪೌಲ್ ಒಹಮೋಬಿ ಮತ್ತು ಉಚೆಚುಕು ಮಲಾಕಿ ಎಲಕ್ವಾಚಿ ರಿಂದ ಡ್ರಗ್ಸ್ ಖರೀದಿಸಿದ್ದಾಗಿ ಹೇಳಿದ್ದಾರೆ. ಹೀಗಾಗಿ ಬೆಂಗಳೂರಿಗೆ ತೆರಳಿದ ನಗರ ಪೊಲೀಸರು ಬಿದರಹಳ್ಳಿಯಲ್ಲಿ ಈ ಇಬ್ಬರನ್ನು ಬಂಧಿಸಿದ್ದಾರೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…
ಕಟಪಾಡಿ: ಮಟ್ಟು ಬೀಚ್ನಲ್ಲಿ ಮುಂದುವರಿದ ಕಡಲ್ಕೊರೆತ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ಬೀಚ್ನಲ್ಲಿ ಕಡಲ್ಕೂರೆತ ಮುಂದುವರಿದಿದೆ.…
ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…
ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ…