ಮಂಗಳೂರು: ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಏಟು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಣ್ಣೀರಬಾವಿ ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟಂತೆ ಸಿಬ್ಬಂದಿ ಸುನೀಲ್ ಅವರನ್ನು ಅಮಾನತುಗೊಳಿಸಲಾಗಿದ್ದು, ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ. ಘಟನೆ ಕುರಿತು ಯಾರಿಂದಲೂ ಪೋಷಕರು ಅಥವಾ ಬಾಲಕನಿಂದಾಗಲಿ ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ.
ಜ.1 ರಂದು ಘಟನೆ ನಡೆದಿದ್ದು, ವಿಕೇಂಡ್ ಮತ್ತು ಹೊಸ ವರ್ಷವಾದ್ದರಿಂದ ತಣ್ಣೀರಭಾವಿ ಬೀಚ್ಗೆ ಭೇಟಿ ನೀಡಿವವರ ಸಂಖ್ಯೆ ಹೆಚ್ಚಿದ್ದು, ಈ ವೇಳೆ ಅಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿಯ ವಿದ್ಯಾರ್ಥಿ, ಪಿಯು ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಬೀಸಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…