ಮಂಗಳೂರು : ಈವರೆಗೆ ತಲೆಮರೆಸಿಕೊಂಡಿರುವ ಆರೋಪಿಗಳು ಹಾಗೂ ಮತ್ತೆ ಗಲಭೆ ಕೃತ್ಯಕ್ಕೆ ಇಳಿದಿರುವ ಆರೋಪಿಗಳ ವಿರುದ್ಧ ಆಸ್ತಿಮುಟ್ಟುಗೋಲು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಿನ್ನೆ ದ.ಕ, ಉಡುಪಿ ಹಾಗೂ ಮಂಗಳೂರು ಕಮಿಷನರೇಟ್ನ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಅವರು ಸುದ್ದಿಗಾರರಲ್ಲಿ ಮಾತನಾಡಿದರು. ಆಗಾಗ ಕೋಮು ಸಂಘರ್ಷ ಉಟಾಗುವುದನ್ನು ತಪ್ಪಿಸುವುದಕ್ಕೆ ಇಂತಹ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ.
ಕೋಮು ಕೇಸಿಗೆ ಸಂಧಿಸಿದಂತೆ ಆರೋಪಿಗಳು ಎಲ್ಲಿದ್ದಾರೆ? ಹೇಗಿದ್ದಾರೆ? ಅವರ ಮೇಲೆ ಯಾವುದಾದರೂ ಪ್ರಿವೆಂಟಿವ್ ಆಗಿ ರೌಡಿ ಶೀಟ್ ತೆರೆಯುವ ಕೆಲಸ ಆಗಿದೆಯಾ? ಕೇಸಿನ ವಿಚಾರಣೆ ಹೇಗೆ. ನಡೆಯುತ್ತಿದೆ ಎಂಬಿತ್ಯಾದಿ ಆಯಾಮಗಳಲ್ಲಿ ಪರಿಶೀಲನೆ ಮಾಡಬೇಕು.
ಶರತ್ ಮಡಿವಾಳ ಹತ್ಯೆ, ದೀಪಕ್ ರಾವ್ ಹತ್ಯೆ, ಪಿಂಕಿ ನವಾಜ್ ಹತ್ಯೆ ಯತ್ನದಂತಹ ಅನೇಕ ಪ್ರಕರಣಗಳಲ್ಲಿ ವಿಚಾರಣೆ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ. ಕೆಲವೊಮ್ಮೆ ಆರೋಪಿಗಳು ಜಾಮೀನು ಪಡೆದು ಹೊರಬರುವುದು, ತನಿಖೆ ಸರಿಯಾಗಿ ನಡೆಯದ ಕೇಸ್ ಖುಲಾಸೆಯಾಗಿ ಹೊರಬಂದು ಆರೋಪಿಗಳು ಮತ್ತೆ ಅಂತಹ ಕೃತ್ಯ ಮುಂದುವರಿಸುವುದು ಆಗಬಾರದು, ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕೋಮುಗಲಭೆಯಲ್ಲಿದ್ದ ಕೆಲವೊಂದು ಆರೋಪಿಗಳು ತಲೆಮರೆಸಿಕೊ೦ಡಿದ್ದರೆ ಆ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದೆ. ಪಿಂಕಿ ನವಾಜ್ ಹತ್ಯೆ ಯತ್ನ ಪ್ರಕರಣ ಆರೋಪಿ ನೌಷಾದ್ ಎಂಬಾತ ತಲೆಮರೆಸಿಕೊಂಡಿರುವುದು ಗೊತ್ತಾಗಿದೆ. ಇಂತಹ ಪ್ರಕರಣದಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…