ಮಂಗಳೂರು: ಅಚ್ಚುಕಟ್ಟಾದ ಬಟ್ಟೆ ಧರಿಸಿ, ಟೈ ಕಟ್ಟಿ ಕೂದಲಿಗೆ ಬಣ್ಣ ಹಚ್ಚಿಕೊಂಡು ಹಣ ಕೇಳಲು ಬರುವ ಹುಡುಗಿಯರ ಮೇಲೆ ಕರುಣೆ ತೋರಿ ಹಣ ಕೊಟ್ಟಿರಾ ಜೋಕೆ! ಯಾಕಂದ್ರೆ ಇಂತಹ ಯುವತಿಯರ ಗುಂಪು ಮಂಗಳೂರಿನಲ್ಲಿ ಈಗ ಭಿಕ್ಷಾಟನೆಯಲ್ಲಿ ತೊಡಗಿದೆ.
ಜೀನ್ಸ್ ಪ್ಯಾಂಟ್, ಶರ್ಟ್, ಕೊರಳಿಗೊಪ್ಪುವ ಟೈ, ಬಣ್ಣ ಹಚ್ಚಿ ಮಾಡಿದ ಕೆಂಬಣ್ಣದ ಕೂದಲು, ತಳಕು ಬಳಕು ಮೈಮಾಟ…ಪಕ್ಕನೆ ನೋಡಿದರೆ ಇವರು ಲುಕ್ ನಲ್ಲಿ ತೀರಾ ಹೈಫೈ..ಆದರೆ ಕೆಲಸ ಮಾತ್ರ ಭಿಕ್ಷಾಟನೆ.. ಒಂಥರಾ ಹೈಟೆಕ್ ನಂತಹ ಭಿಕ್ಷಾಟನೆ ಅಂದರೂ ತಪ್ಪಿಲ್ಲ..ಮಾತಿನಲ್ಲೇ ಮೋಡಿ ಮಾಡಿ ಸಾರ್ವಜನಿಕರಿಂದ ಸಾವಿರಾರು ರೂ. ವಸೂಲಿ ಮಾಡುವ ಮೂಲಕ ಹೈಟೆಕ್ ಭಿಕ್ಷಾಟನೆಯಲ್ಲಿ ತೊಡಗಿದ್ದ ೮ ಮಂದಿ ಲಲನೆಯರು ಇದೀಗ ಪೊಲೀಸರ ಅತಿಥಿಗಳಾದ ಘಟನೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಸ್ಥಾನದ ರಾಣಿಪುರದವರು ಎಂದು ಹೇಳಿಕೊಳ್ಳುವ ಈ ತಂಡ, ಭಿಕ್ಷಾಟನೆಯಲ್ಲಿ ಸಕ್ರಿಯವಾಗಿದೆ. ತಮ್ಮ ಊರಿನಲ್ಲಿ ನೆರೆ ಬಂದಿದ್ದು, ಆಸ್ತಿ ಪಾಸ್ತಿ ಕಳೆದುಕೊಂಡಿದ್ದೇವೆ. ಆಹಾರ ಬಟ್ಟೆ ಬರೆ ಇಲ್ಲದೆ ಸಂತ್ರಸ್ತರಾಗಿರುವ ನಮಗೆ ಧನ ಸಹಾಯ ನೀಡಿ ಎಂದು ಪಾಂಪ್ಲೆಟ್ಸ್ ಹಂಚುತ್ತಿದ್ದಾರೆ. ಕಳೆದ 8 ತಿಂಗಳಿನಿಂದ ನಗರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದಾರೆ. ಸದ್ಯ ಮಹಿಳೆಯರ ಗುಂಪನ್ನು ಮಂಗಳೂರಿನ ಸಾಮಾಜಿಕ ಹೋರಾಟಗಾರ ಸೌರಜ್, ಕದ್ರಿ ಠಾಣಾ ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ. ಈ ಸಂಬಂಧ ಯುವತಿಯರ ಮೇಲೆ ಪ್ರಕರಣ ದಾಖಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…