ಮಂಗಳೂರು: ಅಚ್ಚುಕಟ್ಟಾದ ಬಟ್ಟೆ ಧರಿಸಿ, ಟೈ ಕಟ್ಟಿ ಕೂದಲಿಗೆ ಬಣ್ಣ ಹಚ್ಚಿಕೊಂಡು ಹಣ ಕೇಳಲು ಬರುವ ಹುಡುಗಿಯರ ಮೇಲೆ ಕರುಣೆ ತೋರಿ ಹಣ ಕೊಟ್ಟಿರಾ ಜೋಕೆ! ಯಾಕಂದ್ರೆ ಇಂತಹ ಯುವತಿಯರ ಗುಂಪು ಮಂಗಳೂರಿನಲ್ಲಿ ಈಗ ಭಿಕ್ಷಾಟನೆಯಲ್ಲಿ ತೊಡಗಿದೆ.
ಜೀನ್ಸ್ ಪ್ಯಾಂಟ್, ಶರ್ಟ್, ಕೊರಳಿಗೊಪ್ಪುವ ಟೈ, ಬಣ್ಣ ಹಚ್ಚಿ ಮಾಡಿದ ಕೆಂಬಣ್ಣದ ಕೂದಲು, ತಳಕು ಬಳಕು ಮೈಮಾಟ…ಪಕ್ಕನೆ ನೋಡಿದರೆ ಇವರು ಲುಕ್ ನಲ್ಲಿ ತೀರಾ ಹೈಫೈ..ಆದರೆ ಕೆಲಸ ಮಾತ್ರ ಭಿಕ್ಷಾಟನೆ.. ಒಂಥರಾ ಹೈಟೆಕ್ ನಂತಹ ಭಿಕ್ಷಾಟನೆ ಅಂದರೂ ತಪ್ಪಿಲ್ಲ..ಮಾತಿನಲ್ಲೇ ಮೋಡಿ ಮಾಡಿ ಸಾರ್ವಜನಿಕರಿಂದ ಸಾವಿರಾರು ರೂ. ವಸೂಲಿ ಮಾಡುವ ಮೂಲಕ ಹೈಟೆಕ್ ಭಿಕ್ಷಾಟನೆಯಲ್ಲಿ ತೊಡಗಿದ್ದ ೮ ಮಂದಿ ಲಲನೆಯರು ಇದೀಗ ಪೊಲೀಸರ ಅತಿಥಿಗಳಾದ ಘಟನೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಸ್ಥಾನದ ರಾಣಿಪುರದವರು ಎಂದು ಹೇಳಿಕೊಳ್ಳುವ ಈ ತಂಡ, ಭಿಕ್ಷಾಟನೆಯಲ್ಲಿ ಸಕ್ರಿಯವಾಗಿದೆ. ತಮ್ಮ ಊರಿನಲ್ಲಿ ನೆರೆ ಬಂದಿದ್ದು, ಆಸ್ತಿ ಪಾಸ್ತಿ ಕಳೆದುಕೊಂಡಿದ್ದೇವೆ. ಆಹಾರ ಬಟ್ಟೆ ಬರೆ ಇಲ್ಲದೆ ಸಂತ್ರಸ್ತರಾಗಿರುವ ನಮಗೆ ಧನ ಸಹಾಯ ನೀಡಿ ಎಂದು ಪಾಂಪ್ಲೆಟ್ಸ್ ಹಂಚುತ್ತಿದ್ದಾರೆ. ಕಳೆದ 8 ತಿಂಗಳಿನಿಂದ ನಗರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದಾರೆ. ಸದ್ಯ ಮಹಿಳೆಯರ ಗುಂಪನ್ನು ಮಂಗಳೂರಿನ ಸಾಮಾಜಿಕ ಹೋರಾಟಗಾರ ಸೌರಜ್, ಕದ್ರಿ ಠಾಣಾ ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ. ಈ ಸಂಬಂಧ ಯುವತಿಯರ ಮೇಲೆ ಪ್ರಕರಣ ದಾಖಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…