Featured

ಮಂಗಳೂರು: ತಳಕು ಬಳಕು ಲಲನೆಯರ ಹೈಫೈ ಭಿಕ್ಷಾಟನೆ

ಮಂಗಳೂರು: ಅಚ್ಚುಕಟ್ಟಾದ ಬಟ್ಟೆ ಧರಿಸಿ, ಟೈ ಕಟ್ಟಿ ಕೂದಲಿಗೆ ಬಣ್ಣ ಹಚ್ಚಿಕೊಂಡು ಹಣ ಕೇಳಲು ಬರುವ ಹುಡುಗಿಯರ ಮೇಲೆ ಕರುಣೆ ತೋರಿ ಹಣ ಕೊಟ್ಟಿರಾ ಜೋಕೆ! ಯಾಕಂದ್ರೆ ಇಂತಹ ಯುವತಿಯರ ಗುಂಪು ಮಂಗಳೂರಿನಲ್ಲಿ ಈಗ ಭಿಕ್ಷಾಟನೆಯಲ್ಲಿ ತೊಡಗಿದೆ.

ಜೀನ್ಸ್ ಪ್ಯಾಂಟ್, ಶರ್ಟ್, ಕೊರಳಿಗೊಪ್ಪುವ ಟೈ, ಬಣ್ಣ ಹಚ್ಚಿ ಮಾಡಿದ ಕೆಂಬಣ್ಣದ ಕೂದಲು, ತಳಕು ಬಳಕು ಮೈಮಾಟ…ಪಕ್ಕನೆ ನೋಡಿದರೆ ಇವರು ಲುಕ್ ನಲ್ಲಿ ತೀರಾ ಹೈಫೈ..ಆದರೆ ಕೆಲಸ ಮಾತ್ರ ಭಿಕ್ಷಾಟನೆ.. ಒಂಥರಾ ಹೈಟೆಕ್ ನಂತಹ ಭಿಕ್ಷಾಟನೆ ಅಂದರೂ ತಪ್ಪಿಲ್ಲ..ಮಾತಿನಲ್ಲೇ ಮೋಡಿ ಮಾಡಿ ಸಾರ್ವಜನಿಕರಿಂದ ಸಾವಿರಾರು ರೂ. ವಸೂಲಿ ಮಾಡುವ ಮೂಲಕ ಹೈಟೆಕ್ ಭಿಕ್ಷಾಟನೆಯಲ್ಲಿ ತೊಡಗಿದ್ದ ೮ ಮಂದಿ ಲಲನೆಯರು ಇದೀಗ ಪೊಲೀಸರ ಅತಿಥಿಗಳಾದ ಘಟನೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ರಾಜಸ್ಥಾನದ ರಾಣಿಪುರದವರು ಎಂದು ಹೇಳಿಕೊಳ್ಳುವ ಈ ತಂಡ, ಭಿಕ್ಷಾಟನೆಯಲ್ಲಿ ಸಕ್ರಿಯವಾಗಿದೆ. ತಮ್ಮ ಊರಿನಲ್ಲಿ ನೆರೆ ಬಂದಿದ್ದು, ಆಸ್ತಿ ಪಾಸ್ತಿ ಕಳೆದುಕೊಂಡಿದ್ದೇವೆ. ಆಹಾರ ಬಟ್ಟೆ ಬರೆ ಇಲ್ಲದೆ ಸಂತ್ರಸ್ತರಾಗಿರುವ ನಮಗೆ ಧನ ಸಹಾಯ ನೀಡಿ ಎಂದು ಪಾಂಪ್ಲೆಟ್ಸ್‌ ಹಂಚುತ್ತಿದ್ದಾರೆ. ಕಳೆದ 8 ತಿಂಗಳಿನಿಂದ ನಗರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದಾರೆ. ಸದ್ಯ ಮಹಿಳೆಯರ ಗುಂಪನ್ನು ಮಂಗಳೂರಿನ ಸಾಮಾಜಿಕ ಹೋರಾಟಗಾರ ಸೌರಜ್, ಕದ್ರಿ ಠಾಣಾ ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ. ಈ ಸಂಬಂಧ ಯುವತಿಯರ ಮೇಲೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

26 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

1 hour ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

1 hour ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

1 hour ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

1 hour ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

2 hours ago