ಮಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕಿನಿಂದಾಗಿ ಅರ್ಚಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಾರಣ ಸರ್ಕಾರದಿಂದ ತಸ್ತಿಕ್ ಭತ್ತೆ ನೀಡಲು ಆದೇಶಿಸಿದನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸುತ್ತದೆ. ಆದರೆ ಅದೇ ಆದೇಶದ ಪ್ರಕಾರ ತಸ್ತಿಕ್ ಹಣವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ 41 ಮಸೀದಿ, ಮದರಸಾದ ಮೌಲ್ವಿಗಳಿಗೆ ನೀಡಲು ನಿರ್ಧರಿಸಿದ್ದನ್ನು ವಿಶ್ವ ಹಿಂದೂ ಪರಿಷದ್ ವಿರೋಧಿಸುತ್ತದೆ.
ದೈವಸ್ಥಾನ, ದೇವಸ್ಥಾನದ ಹಣವನ್ನು ಹಿಂದೂಗಳಿಗೆ ಮತ್ತು ದೇವಸ್ಥಾನದ ಕಾರ್ಯಗಳಿಗೆ ಮಾತ್ರ ಉಪಯೋಗಿಸಬೇಕು ವಿನಃ ಮಸೀದಿ, ಮದರಸಾಗಳಿಗೆ ಉಪಯೋಗಿಸುವುದನ್ನು ಖಂಡಿಸುವ ಮೂಲಕ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮನವಿ ಸಲ್ಲಿಸಲಾಯಿತು.
ಮನವಿಗೆ ಸ್ಪಂದಿಸಿದ ಸಚಿವರು ನಿರ್ಧಾರವನ್ನು ಹಿಂದೆ ಪಡೆಯುವುದಾಗಿ ಭರವಸೆ ಕೊಟ್ಟರು. ವಿಶ್ವ ಹಿಂದೂ ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಜಿಲ್ಲಾ ಅಧ್ಯಕ್ಷ ಗೋಪಾಲ್ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ, ಜಿಲ್ಲಾ ಸಂಚಾಲಕ್ ಪುನೀತ್ ಅತ್ತಾವರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…