ಮಂಗಳೂರು: ತಾನು ಕೆಲಸ ಮಾಡಿಕೊಂಡಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಕೊಡಿಯಾಲಬೈಲಿನಲ್ಲಿ ಗುರುವಾರ(ಜೂ.26) ಬೆಳಕಿಗೆ ಬಂದಿದೆ.
ಅಳಕೆ ನಿವಾಸಿ ಗಿರಿಧರ್ ಯಾದವ್ (61)ಆತ್ಮಹತ್ಯೆ ಮಾಡಿಕೊಂಡವರು.
ಗಿರಿಧರ್ ಅವರು ಕೊಡಿಯಾಲಬೈಲಿನ ಬ್ಯಾಂಕ್ ಒಂದರಲ್ಲಿ ಅಟೆಂಡರ್ ಕೆಲಸ ನಿರ್ವಹಿಸುತ್ತಿದ್ದು ಇತ್ತೀಚಿಗೆ ನಿವೃತ್ತರಾಗಿದ್ದರು, ಆದರೆ ಆ ಬಳಿಕವೂ ಬ್ಯಾಂಕ್ಗೆ ಬಂದು ಹೋಗುತ್ತಿದ್ದರು ಅದರಂತೆ ಬುಧವಾರವೂ ಬಂದಿದ್ದ ಅವರು ಮನೆಗೆ ಹೋಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಪತ್ನಿ ಬಂದರು ಠಾಣೆಗೆ ದೂರು ನೀಡಿದ್ದರು.
ಗುರುವಾರ ಬೆಳಗ್ಗೆ ಬ್ಯಾಂಕಿನ ಸಿಬ್ಬಂದಿ ಸ್ಟೋರ್ ರೂಂ ತೆರೆದಾಗ ಅಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗಿರಿಧರ್ ದೇಹ ಪತ್ತೆಯಾಗಿದೆ.
ಪವರ್ ಲಿಫ್ಟರ್ ಆಗಿದ್ದ ಯಾದವ್ ಹಲವು ಪದಕಗಳನ್ನು ಪಡೆದಿದ್ದರು ಎಂದು ಹೇಳಲಾಗಿದ್ದು ಇತ್ತೀಚಿಗೆ ಹಲವು ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಘಟನೆ ಸಂಬಂಧ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…