ಮಂಗಳೂರು: ತಾನು ಕೆಲಸ ಮಾಡಿಕೊಂಡಿದ್ದ ಬ್ಯಾಂಕ್ ನಲ್ಲೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಕೊಡಿಯಾಲಬೈಲಿನಲ್ಲಿ ಗುರುವಾರ(ಜೂ.26) ಬೆಳಕಿಗೆ ಬಂದಿದೆ.
ಅಳಕೆ ನಿವಾಸಿ ಗಿರಿಧರ್ ಯಾದವ್ (61)ಆತ್ಮಹತ್ಯೆ ಮಾಡಿಕೊಂಡವರು.
ಗಿರಿಧರ್ ಅವರು ಕೊಡಿಯಾಲಬೈಲಿನ ಬ್ಯಾಂಕ್ ಒಂದರಲ್ಲಿ ಅಟೆಂಡರ್ ಕೆಲಸ ನಿರ್ವಹಿಸುತ್ತಿದ್ದು ಇತ್ತೀಚಿಗೆ ನಿವೃತ್ತರಾಗಿದ್ದರು, ಆದರೆ ಆ ಬಳಿಕವೂ ಬ್ಯಾಂಕ್ಗೆ ಬಂದು ಹೋಗುತ್ತಿದ್ದರು ಅದರಂತೆ ಬುಧವಾರವೂ ಬಂದಿದ್ದ ಅವರು ಮನೆಗೆ ಹೋಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಪತ್ನಿ ಬಂದರು ಠಾಣೆಗೆ ದೂರು ನೀಡಿದ್ದರು.
ಗುರುವಾರ ಬೆಳಗ್ಗೆ ಬ್ಯಾಂಕಿನ ಸಿಬ್ಬಂದಿ ಸ್ಟೋರ್ ರೂಂ ತೆರೆದಾಗ ಅಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗಿರಿಧರ್ ದೇಹ ಪತ್ತೆಯಾಗಿದೆ.
ಪವರ್ ಲಿಫ್ಟರ್ ಆಗಿದ್ದ ಯಾದವ್ ಹಲವು ಪದಕಗಳನ್ನು ಪಡೆದಿದ್ದರು ಎಂದು ಹೇಳಲಾಗಿದ್ದು ಇತ್ತೀಚಿಗೆ ಹಲವು ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಘಟನೆ ಸಂಬಂಧ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…