ಮಂಗಳೂರು: ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿದ್ದುಎಲ್ಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಅಧೀನಕ್ಕೊಳಪಟ್ಟ ವಿದ್ಯಾರ್ಥಿ ನಿಲಯಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳ ಆರೋಗ್ಯದ ಹಿನ್ನೆಲೆಯಲ್ಲಿ ಸೂಕ್ತ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ವಿಶೇಷ ಸೂಚನೆ ನೀಡಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳಿಗೂ ಶುದ್ಧ ಕುಡಿಯುವ ನೀರನ್ನು ಕೊಡಬೇಕು. ಆದಷ್ಟು ಕುದಿಸಿ ಆರಿಸಿದ ನೀರನ್ನು ಕುಡಿಯುವಂತೆ ತಿಳಿಸಬೇಕು.ವಿದ್ಯಾರ್ಥಿ ನಿಲಯಗಳ ಅಡುಗೆ ಕೋಣೆಯನ್ನು ಮತ್ತು ಅಡುಗೆಗೆ ಬಳಸುವ ಪಾತ್ರೆ, ಪರಿಕರಗಳನ್ನು ಸ್ವಚ್ಛವಾಗಿಟ್ಟುಕೊಂಡಿರಬೇಕು. ಅಡುಗೆ ತಯಾರಿಸುವವರು ಮತ್ತು ಆಹಾರ ಬಡಿಸುವವರು ಕೈಗಳ ಶುಚಿತ್ವ ಸೇರಿದಂತೆ ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಪ್ರತಿ 6 ತಿಂಗಳಿಗೊಮ್ಮೆ ಅಡುಗೆ ಕೋಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ ಮತ್ತು ಆಹಾರ ತಯಾರಕರ ಆರೋಗ್ಯ ತಪಾಸಣೆಯನ್ನು ನಡೆಸುವುದು ಸೇರಿದಂತೆ
ವಿದ್ಯಾರ್ಥಿ ನಿಲಯಗಳಿಗೆ ವಿವಿಧ ಮೂಲಗಳಿಂದ ಸರಬರಾಜು ಆಗುವ ನೀರಿನ ಮಾದರಿಯನ್ನು ಪ್ರತೀ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿ, ಕುಡಿಯಲು ಮತ್ತು ಅಡುಗೆ ತಯಾರಿಕೆಗೆ ಸುರಕ್ಷಿತ ನೀರನ್ನು ಒದಗಿಸಲು ಅಗತ್ಯ ವಿದ್ಯಾರ್ಥಿ ನಿಲಯಗಳ ಶೌಚಾಲಯ, ಸ್ನಾನದ ಕೋಣೆಯನ್ನು ಸ್ವಚ್ಚವಾಗಿಡಬೇಕು
ಬೇಸಿಗೆ ಸಂದರ್ಭ ಆಹಾರ ಪದಾರ್ಥಗಳು ಬೇಗನೆ ಕೆಡುವ ಸಾಧ್ಯತೆ ಇರುವುದರಿಂದ, ಈ ಬಗ್ಗೆ ಗಮನಹರಿಸಿ, ಎಲ್ಲಾ ವಿದ್ಯಾರ್ಥಿಗಳಿಗೂ ಬಿಸಿಯಾದ ಸುರಕ್ಷಿತ ಆಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು.ವಿದ್ಯಾರ್ಥಿ ನಿಲಯಗಳ ಶೌಚಾಲಯ, ಸ್ನಾನದ ಕೋಣೆಯನ್ನು ಸ್ವಚ್ಛವಾಗಿಡಬೇಕು.ಬೇಸಿಗೆ ಸಂದರ್ಭದಲ್ಲಿ ನಿರ್ಜಲೀಕರಣ ಆಗುವ ಸಾಧ್ಯತೆ ಇರುವುದರಿಂದ, ಬಗ್ಗೆ ಎಲ್ಲಾ ವಿದ್ಯಾರ್ಥಿಗಳಿಗೂ ಮಾಹಿತಿ ನೀಡಿ ಎಲ್ಲರೂ ಶುದ್ಧ ನೀರು, ದ್ರವ ಆಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವಂತೆ ಜಾಗೃತಿ ವಹಿಸಬೇಕು.ಅಡುಗೆ ಕೋಣೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಪ್ರತಿದಿನ ಸೂಕ್ತ ರೀತಿಯಲ್ಲಿ ವಿಲೇವಾರಿ ನಡೆಸಬೇಕು.
ಯಾವುದಾದರೂ ವಿದ್ಯಾರ್ಥಿಗೆ ಅನಾರೋಗ್ಯ ಕಂಡುಬಂದಲ್ಲಿ ಕೂಡಲೇ ವೈದ್ಯಾಧಿಕಾರಿ, ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಬೇಕು.ಈ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…