Featured

ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ  – Vishwanews24

ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ..

ರಾಜ್ಯದಲ್ಲಿ ದಸರಾ ರಜೆಯನ್ನು ಅಕ್ಟೋಬರ್ 3 ರಿಂದ ಅಕ್ಟೋಬರ್ 16 ರವರೆಗೆ..

ಮಂಗಳೂರು : ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ದಸರಾ ಸೆಪ್ಟೆಂಬರ್ 28ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ದಸರಾ ರಜೆಯನ್ನು ಅಕ್ಟೋಬರ್ 3 ರಿಂದ ಅಕ್ಟೋಬರ್ 16 ರವರೆಗೆ ನೀಡಲಾಗಿದೆ. ಆದರೆ ಮಂಗಳೂರು ದಸರಾ ಆರಂಭಗೊಳ್ಳುವ ಸಂದರ್ಭದಲ್ಲೇ ನಗರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಬೇಕೆಂದು ಆಗ್ರಹಗಳು ಕೇಳಿಬಂದಿತ್ತು.

ಇದನ್ನೂ ಓದಿ : ಸಮಸ್ಯೆ ಗಳಿಗೆ ಶೀಘ್ರ ಪರಿಹಾರ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇದೀಗ ತಾಲೂಕಿನಲ್ಲಿ ಹೆಚ್ಚುವರಿ ನಾಲ್ಕು ದಿನ ರಜೆ ಘೋಷಿಸಲು ಶಿಕ್ಷಣ ಸಚಿವರು ಸೂಚಿಸಿದ ಹಿನ್ನೆಲೆ ಮಂಗಳೂರು ತಾಲೂಕಿನಲ್ಲಿ ಮಾತ್ರ ಸೆ. 28 ರಿಂದ ಅಕ್ಟೋಬರ್ 1ರ ತನಕ ಹೆಚ್ಚುವರಿ ರಜೆ ನೀಡಲಾಗಿದ್ದು, ಆ ಮೂಲಕ ಅಕ್ಟೋಬರ್ 16ರವರೆಗೆ ದಸರಾ ರಜೆ ನೀಡಿದಂತಾಗಿದೆ.

ಅಕ್ಟೋಬರ್ 2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸೂಚಿಸಲಾಗಿದೆ. ಹಾಗೂ ಮಂಗಳೂರಿನಲ್ಲಿ ಹೆಚ್ಚುವರಿಯಾಗಿ ನೀಡಿರುವ 4 ದಿನಗಳ ರಜೆಯನ್ನು ನವೆಂಬರ್ (2022) ತಿಂಗಳಲ್ಲಿ ನಾಲ್ಕು ಶನಿವಾರ ಪೂರ್ಣದಿನದ ತರಗತಿಗಳನ್ನು ಹಾಗೂ ಎರಡು ಭಾನುವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ಸರಿದೂಗಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶರ್ಟ್ ತೆಗೆದು ದೇವಾಲಯಗಳ ಒಳಗೆ ಹೋಗುದರಿಂದ ಒಬ್ಬರ ಮೈ ಇನ್ನೊಬ್ಬರಿಗೆ ತಾಗಿ ಚರ್ಮ ರೋಗ ಬರುತ್ತದೆ..

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

20 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

21 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago