ಮಂಗಳೂರು: ಭಾರಿ ಯಶಸ್ಸು ಕಾಣುತ್ತಿರುವ ಕಾಂತಾರ ಚಿತ್ರವನ್ನು ತೆರಿಗೆ ವಿನಾಯಿತಿ ಮಾಡುವಂತೆ ದಕ್ಷಿಣ ಕನ್ನಡದ ಕಾಂಗ್ರೇಸ್ ನಾಯಕ ಮಿಥುನ್ ರೈ ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ.
ತನ್ನ ಫೇಸ್ಬುಕಲ್ಲಿ ಈ ಕುರಿತು ಬರೆದುಕೊಂಡಿರುವ ಮಿಥುನ್ ರೈ , ಇಡೀ ಜಗತ್ತಿನಲ್ಲಿ “ದೈವಾರಾಧನೆ”ಗೆ ಇವತ್ತು ಒಂದು ಪ್ರಮುಖವಾದ ಪ್ರಾಶ್ಯಸ್ತತೆ ಇದೆ, ಅದು ಹುಟ್ಟಿಕೊಂಡಿದ್ದು ನಮ್ಮ ತುಳುನಾಡಿನ ಮಣ್ಣಿನಲ್ಲಿ . ದೈವಾರಾಧನೆಗೆ ಜನರಿಗೆ ಇರುವ ಭಯ ಭಕ್ತಿ ಇವತ್ತು ಮಾಸುವಂತಹ ಸಂದಿಗ್ನ ಪರಿಸ್ಥಿತಿಗಳಲ್ಲಿ , ಒಂದು ಸಿನಿಮಾದ ಮುಖಾಂತರ ದೈವಾರಾಧನೆಯ ವಿಶಿಷ್ಟತೆ ಹಾಗೂ ಪ್ರಾಮುಖ್ಯತೆಯ ಬಗ್ಗೆ ಜನರ ಮನಮುಟ್ಟಿಸುವ ಪ್ರಯತ್ನ ಇವತ್ತು “ಕಾಂತಾರ” ಚಿತ್ರದ ಮೂಲಕ ಫಲಿಸಿದೆ .
“#kanthara” ಚಲನಚಿತ್ರ … ಮಾತಿನಲ್ಲಿ ಎಷ್ಟು ಹೇಳಿದರೂ ಸಾಲದು … ಇದರ ಅಧ್ಬುತ ಪರಿಕಲ್ಪನೆಗ ಬಗ್ಗೆ ಶಬ್ದಗಳೇ ಬಾರದು ! ಸನ್ಮಾನ ಮುಖ್ಯಮಂತ್ರಿಗಳಲ್ಲಿ ವಿನಮ್ರತೆಯಿಂದ ಮನವಿ ಮಾಡುತ್ತಾ ಇದ್ದೇನೆ, “ಕಾಂತಾರ” ಚಲನಚಿತ್ರ ಪ್ರತಿ ಮನೆಮನೆಗೆ ಮುಟ್ಟಬೇಕು, ಈ ಚಿತ್ರಕ್ಕೆ ತೆರಿಗೆ ಮುಕ್ತ ಮಾಡಬೇಕು. ತುಳುನಾಡಿನ ದೈವಾರಾಧನೆಯ ಮಹತ್ವ ಸಮಸ್ತ ಕರ್ನಾಟಕದಲ್ಲಿ ತಿಳಿಯಬೇಕೆಂದು ಸಮಸ್ತ ತುಳುವೆರ ಕೋರಿಕೆ.
ತಳಮಟ್ಟದ ಬಿಜೆಪಿ ಕಾರ್ಯಕರ್ತೆ ಶ್ಯಾಮಲಾ ಕುಂದರ್ಗೆ ಈ ಬಾರಿ ಎಂಎಲ್ಎ ಟಿಕೆಟ್ ಫಿಕ್ಸ್ ಆಂತರಿಕ ಸಮೀಕ್ಷೆ vishwanews24
ತುಳುನಾಡಿನ ದೈವಾರಾಧನೆಯ ವೈಶಿಷ್ಟ್ಯತೆಯನ್ನು ಬಿಂಬಿಸುವ ಜತೆಗೆ ಆರಾಧನೆಯ ಮಹತ್ವವನ್ನು ಸಾರಿ ಹೇಳಿದ ‘ಕಾಂತಾರ’ ಸಿನಿಮಾ ನಿಜಕ್ಕೂ ಅದ್ಭುತವಾಗಿ ಮೂಡಿಬಂದಿದೆ. ದೈವಾರಾಧನೆ ಮತ್ತು ನಂಬಿಕೆಯನ್ನು ಎಳೆಎಳೆಯಾಗಿ ಪ್ರಸ್ತುಪಡಿಸುವ ಮೂಲಕ ಯುವಸಮಾಜದಲ್ಲಿ ಮತ್ತಷ್ಟು ನಂಬಿಕೆ ಜಾಗೃತಿಗೊಳಿಸಿದೆ.
ಈ ಸಿನಿಮಾವನ್ನು Chief Minister of Karnataka ವೀಕ್ಷಣೆ ಮಾಡಬೇಕು ಮತ್ತು ಈ ಸಿನಿಮಾಕ್ಕೆ ತೆರಿಗೆ ವಿನಾಯಿತಿಯನ್ನು ನೀಡಬೇಕು ಎಂಬುವುದು ಸರ್ವ ತುಳುನಾಡಿಗರ ಪರವಾಗಿ ಆಗ್ರಹ. Rishab Shetty Films ಹಾಗೂ ಅವರ ತಂಡ ಕರಾವಳಿ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಪರಂಪರೆಯ ಕುರಿತು ಸಮಗ್ರವಾಗಿ ವೇದಿಕೆ ತರುವಲ್ಲಿ ಯಶಸ್ವಿಯಾಗಿ ದುಡಿದಿರುವುದು ಶ್ಲಾಘನೀಯವಾದದ್ದು ಈ ಒಂದು ಚಲನಚಿತ್ರವನ್ನು ಮನೋರಂಜನ ದೃಷ್ಟಿಯಲ್ಲಿ ನೋಡದೆ ಸಮಾಜದ ಎಲ್ಲಾ ಜನರು ಇದು ಇತಿಹಾಸದ ಕುರಿತು ಒಂದು ಅವಲೋಕನ ಎಂಬಂತೆ ಎಲ್ಲರೂ ವೀಕ್ಷಣೆ ಮಾಡಬೇಕು ಎನ್ನುವುದು ನನ್ನ ಕೋರಿಕೆ.
ನಿಮ್ಮ ಈ ಚಲನಚಿತ್ರ ಇತಿಹಾಸದ ಮೈಲುಗಲ್ಲನ್ನು ನಿರ್ಮಾಣ ಮಾಡುವಂತಾಗಲಿ ಮುಂದಿನ ಜನಾಂಗಕ್ಕೆ ಉತ್ತಮ ಸಂದೇಶವನ್ನು ತಲುಪಿಸುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಮಿಥುನ್ ರೈ ತನ್ನ ಫೇಸ್ಬುಕಲ್ಲಿ ಬರೆದುಕೊಂಡಿದ್ದಾರೆ. ವಿಜಯ ಕಿರಗಂದೂರು ರವರ ಹೊಂಬಾಳೆ ಬ್ಯಾನರಿನಡಿ ನಿರ್ಮಾಣವಾದ ರಿಷಭ್ ಶೆಟ್ಟಿ ನಟನೆಯ ಕಾಂತಾರ ಚಿತ್ರ ಭಾರಿ ಯಶಸ್ಸು ಕಾಣುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…