ಮಂಗಳೂರು : ತುಳು ಭಾಷೆಯನ್ನು ಕರ್ನಾಟಕ ಹಾಗೂ ಕೇರಳ ಸರ್ಕಾರದ ಅಧಿಕೃತ ರಾಜ್ಯ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ತುಳು ಭಾಷಿಗರಿಂದ ಟ್ವಿಟ್ಟರ್ ಅಭಿಯಾನ ಪ್ರಾರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೂಡಾ ಈ ಅಭಿಯಾನಕ್ಕೆ ಪ್ರತಿಕ್ರಿಯಿಸಿದ್ದು, “ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಸರ್ಕಾರದೊಂದಿಗೆ ಮಾತುಕತೆ ನಡೆಯುತ್ತಿದೆ” ಎಂದು ತುಳುವಿನಲ್ಲಿ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಡಿರುವ ಅವರು, “ಪೆದ್ದ್ ತಾಂಕಿದಿನ ಅಪ್ಪೆ ಲೆಕ ಮಟ್ಟೆಲ್ ಡ್ ಮಾನಾಯಿನ ಅಪ್ಪೆ ಬಾಸೆಗ್ ರಾಜ್ಯ ಬಾಸೆದ ಮಾನಾದಿಗೆ ತಿಕ್ಕೊಡು ಪನ್ಪಿನ ಪೊರಂಬಾಟಗ್ ಎನ್ನ ಬೆರಿಸಾಯ ಉಂಡು. ತುಲು ಬಾಸೆನ್ 8ನೇ ಪರಿಚ್ಛೇದಗ್ ಸೇರ್ಪಾವರೆ ಸರಕಾದೊಟ್ಟುಗು ಪಾತೆರಕತೆ ಆವೊಂದುಂಡು. ಒಂಜಾತ್ ತಾಂತ್ರಿಕ ದೋಷಲೆನ್ ಸರಿ ಮಲ್ತ್ದ್ ನಮ್ಮ ಅವಧಿಡ್ ತುಲು ಬಾಸೆಗ್ ರಾಜ್ಯದ ಅಧಿಕೃತ ಬಾಸೆ ಪನ್ಪುನ ಮಾನಾದಿಗೆ ಕೊರ್ಪಾವ ( ಹೆತ್ತ ತಾಯಿಯ ರೀತಿ ಇರುವ ನಮ್ಮ ಮಾತೃಭಾಷೆಗೆ ರಾಜ್ಯ ಭಾಷೆಯ ಮಾನ್ಯತೆ ಸಿಗಬೇಕು ಎನ್ನುವ ಹೋರಾಟಕ್ಕೆ ನನ್ನ ಬೆಂಬಲವೂ ಇದೆ. ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ. ಒಂದಿಷ್ಟು ತಾಂತ್ರಿಕ ದೋಷಗಳನ್ನು ಸರಪಡಿಸಿ ನಮ್ಮ ಆಡಳಿತದ ಅವಧಿಯಲ್ಲೇ ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆ ಎನ್ನುವ ಮಾನ್ಯತೆಯನ್ನು ಕೊಡಿಸುತ್ತೇವೆ)” ಎಂದು ತಿಳಿಸಿದ್ದಾರೆ.
“ತುಳು ರಾಜ್ಯದ ಆಡಳಿತಾತ್ಮಕ ಭಾಷೆ ಆಗಬೇಕು, ತುಳುವಿಗೆ ವಿಶೇಷ ಮಾನ್ಯತೆ ಸಿಗಬೇಕೆನ್ನುವ ತುಳುನಾಡಿನ ಬಂಧುಗಳ ಹೋರಾಟಕ್ಕೆ ನನ್ನದೂ ಧ್ವನಿ ಇದೆ.ತುಳು ಒಂದು ಭಾಷೆ ಮಾತ್ರವಲ್ಲ,ತುಳು ಒಂದು ಸಂಸ್ಕೃತಿ-ಪರಂಪರೆ.ಅದ್ಭುತ ಇತಿಹಾಸ ಇರುವ ತುಳುನಾಡಿನ ಭಾಷೆಗೆ ಶೀಘ್ರ ವಿಶೇಷ ಮಾನ್ಯತೆ ಸಿಗಬೇಕು ಎನ್ನುವುದು ನನ್ನ ಆಶಯ” ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೂಡಾ ಟ್ವೀಟ್ ಮೂಲಕ ಬೆಂಬಲ ಸೂಚಿಸಿದ್ದಾರೆ.
ಪೆದ್ದ್ ತಾಂಕಿದಿನ ಅಪ್ಪೆ ಲೆಕ ಮಟ್ಟೆಲ್ ಡ್ ಮಾನಾಯಿನ ಅಪ್ಪೆ ಬಾಸೆಗ್ ರಾಜ್ಯ ಬಾಸೆದ ಮಾನಾದಿಗೆ ತಿಕ್ಕೊಡು ಪನ್ಪಿನ ಪೊರಂಬಾಟಗ್ ಎನ್ನ ಬೆರಿಸಾಯ ಉಂಡು. ತುಲು ಬಾಸೆನ್ 8ನೇ ಪರಿಚ್ಛೇದಗ್ ಸೇರ್ಪಾವರೆ ಸರಕಾದೊಟ್ಟುಗು ಪಾತೆರಕತೆ ಆವೊಂದುಂಡು.(1)#TuluofficialinKA_KL #ತುಳುನಾಡು #ತುಳುಭಾಷೆ #TuluTo8thSchedule
— Nalinkumar Kateel (@nalinkateel) June 13, 2021
ತುಳು ರಾಜ್ಯದ ಆಡಳಿತಾತ್ಮಕ ಭಾಷೆ ಆಗಬೇಕು,ತುಳುವಿಗೆ ವಿಶೇಷ ಮಾನ್ಯತೆ ಸಿಗಬೇಕೆನ್ನುವ ತುಳುನಾಡಿನ ಬಂಧುಗಳ ಹೋರಾಟಕ್ಕೆ ನನ್ನದೂ ಧ್ವನಿ ಇದೆ.ತುಳು ಒಂದು ಭಾಷೆ ಮಾತ್ರವಲ್ಲ,ತುಳು ಒಂದು ಸಂಸ್ಕೃತಿ-ಪರಂಪರೆ.ಅದ್ಭುತ ಇತಿಹಾಸ ಇರುವ ತುಳುನಾಡಿನ ಭಾಷೆಗೆ ಶೀಘ್ರ ವಿಶೇಷ ಮಾನ್ಯತೆ ಸಿಗಬೇಕು ಎನ್ನುವುದು ನನ್ನ ಆಶಯ.@BSYBJP#TuluOfficialinKA_KL
— Kota Shrinivas Poojari (@KotasBJP) June 13, 2021
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…