Featured

ಮಂಗಳೂರು : ತುಳು ಮಾನ್ಯತೆಗಾಗಿ ‘ನಮ್ಮ ಪ್ರಧಾನಿಗೆ ತುಳುವೆರೆ ಪೋಸ್ಟ್ ಕಾರ್ಡ್’ ಅಭಿಯಾನ – Vishwanews24

ತುಳು ಮಾನ್ಯತೆಗಾಗಿ ‘ನಮ್ಮ ಪ್ರಧಾನಿಗೆ ತುಳುವೆರೆ ಪೋಸ್ಟ್ ಕಾರ್ಡ್’ ಅಭಿಯಾನ

ಮಂಗಳೂರು: ತುಳುವೆರ್ ಕುಡ್ಲ (ರಿ) ಮಂಗಳೂರು, ತುಳುನಾಡು ವಾರ್ತೆ ವಾರಪತ್ರಿಕೆ ಮತ್ತು ‘ನಮ್ಮ ಟಿ.ವಿ’ ಸಂಯುಕ್ತ ಆಯೋಜನೆಯಲ್ಲಿ ‘ನಮ್ಮ ಪ್ರಧಾನಿಗೆ ತುಳುವೆರೆ ಪೋಸ್ಟ್ ಕಾರ್ಡ್’ ಎಂಬ ಅಭಿಯಾನವನ್ನು ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ವಿಷಯ ತಿಳಿಸಿದ ಸಂಘಟಕ ನವೀನ್ ಶೆಟ್ಟಿ ಎಡ್ಮೆಮಾರ್, ‘ಸೆ 1ರಂದು ಬೆಳಗ್ಗೆ 10:30ಕ್ಕೆ ಬಂಜಾರ್ ಮಲೆ ಗ್ರಾಮದಿಂದ ಈ ಅಭಿಯಾನ ಆರಂಭಗೊಳ್ಳಲಿದೆ. ಕಳೆದ ಒಂದು ವರ್ಷದಿಂದ ತುಳು ಭಾಷೆಗೆ ಮಾನ್ಯತೆ ನೀಡುವ ವಿಚಾರವಾಗಿ ಅದೆಷ್ಟೇ ಹೋರಾಟ ನಡೆಸಿದರೂ ಯಾವುದೇ ಫಲಪ್ರದವಾಗಲಿಲ್ಲ.

ಸಂಘ ಸಂಸ್ಥೆಗಳು ತಮ್ಮ ಧ್ವನಿಯನ್ನು ಎತ್ತಿದರೂ ಈವರೆಗೆ ಯಾವುದೇ ಫಲ ಲಭಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುಳುವರಿಂದ ಪೋಸ್ಟ್ ಕಾರ್ಡ್ ಮೂಲಕ ತುಳುಬಾಷೆಗೆ ಅಧಿಕೃತ ಮಾನ್ಯತೆಯನ್ನು ಒದಗಿಸಬೇಕಾಗಿ ಈ ವಿಭಿನ್ನ ರೀತಿಯಲ್ಲಿ ಅಭಿಯಾನವನ್ನು ಆಯೋಜಿಸಲಾಗಿದೆ. ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ – Vishwanews24 

ಈ ಅಭಿಯಾನವು 1,00,000ಕ್ಕೂ ಅಧಿಕ ಪೋಸ್ಟ್ ಕಾರ್ಡ್‌ನ್ನು ತುಳುವರಿಂದ ಅಂಚೆಯ ಮೂಲಕ ಪ್ರಧಾನಿಯವರಿಗೆ ಕಳುಹಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದರು. ಇನ್ನು ಈ ಬಗ್ಗೆ ತುಳುವೆರ್ ಕುಡ್ಲದ ಅಧ್ಯಕ್ಷ ಪ್ರತೀಕ್ ಪೂಜಾರಿ ಮಾತನಾಡಿ ‘ಈ ಅಭಿಯಾನವು ಯಾವುದೇ ರಾಜಕೀಯ/ವೈಯಕ್ತಿಕ ಉದ್ದೇಶವನ್ನು ಹೊಂದಿಲ್ಲ.

ಅಭಿಯಾನವು ಚಾಲನೆಯಾದ ಬಳಿಕ ಎಲ್ಲಾ ತುಳುಪರ ಸಂಘಟನೆಗಳು, ರಾಜಕೀಯ ಪಕ್ಷ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ಇತರ ಎಲ್ಲಾ ಸಂಘ ಸಂಸ್ಥೆಗಳು ಅಭಿಯಾನದಲ್ಲಿ ನಮ್ಮೊಂದಿಗೆ ಕೈಜೋಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಹಿಳಾ ವಿಭಾಗದ ಅಧ್ಯಕ್ಷೆ ಪೂಜಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯರಾಂ, ತುಳುನಾಡ ವಾರ್ತೆಯ ಪುನೀತ್ ಉಪಸ್ಥಿತರಿದ್ದರು. ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್‌ ಸೇನ್‌ ನಿಧನ – Vishwanews24 

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago