Featured

ಮಂಗಳೂರು ದಸರಾ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಡಿಸಿಎಂ ಶಿವಕುಮಾರ್  – vishwanews24

ಮಂಗಳೂರು ದಸರಾ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಡಿಸಿಎಂ ಶಿವಕುಮಾರ್

ಮಂಗಳೂರು: ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಬುಧವಾರ ರಾತ್ರಿ ಭೇಟಿ ನೀಡಿ ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ದೇವರ ಬಲಿ ಉತ್ಸವದ ಶುಭ ಸಂಧರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ ಉಪಮುಖ್ಯಮಂತ್ರಿ, ಸಂಪ್ರದಾಯದಂತೆ ದೇವರ ರಥಾರೋಹಣ ನಂತರ ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿಯಾದರು. ದೇವಳ ಸ್ಥಾಪಿಸಿದ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸನ್ನಿಧಿಗೆ ನಮಿಸಿ, ಸರ್ವ ದೇವರ ದರ್ಶನ ಪಡೆದು, ದರ್ಬಾರ್ ಮಂಟಪದಲ್ಲಿ ಶಾರದೆ ಮತ್ತು ನವದುರ್ಗೆಯರಿಗೆ ವಂದಿಸಿದರು. ಈ ವೇಳೆ ಉಪಮುಖ್ಯಮಂತ್ರಿಗೆ ಪ್ರಸಾದ ನೀಡಿ, ದೇವಳದ ವತಿಯಿಂದ ಗೌರವಿಸಲಾಯಿತು.

ಬಳಿಕ ಮಾತನಾಡಿದ ಅವರು, ನಾನು ಇಂದು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಸಾಕ್ಷಾತ್ ಶಾರದಾ ಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಂತಿದೆ. ಶ್ರೀ ನಾರಾಯಣ ಗುರು ಸ್ಥಾಪಿಸಿದ ಈ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿರುವುದು ನನ್ನ ಸೌಭಾಗ್ಯ ಮಂಗಳೂರು ದಸರಾ ವೈಭವ ಕಂಡು ಬಹಳ ಸಂತೋಷವಾಯಿತು ಎಂದರು.

ದೇವಸ್ಥಾನದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ ಮಾಲಾರ್ಪಣೆಗೈದು ಸ್ವಾಗತಿಸಿದರು.

ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಪೂಜಾರಿ, ಕೃತಿನ್ ಅಮೀನ್, ಕಿಶೋರ್ ದಂಡಕೇರಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಪಿ.ಕೆ.ಗೌರವಿ, ದೀಪಕ್ ಪೂಜಾರಿ ಹಾಗೂ ಸಮಿತಿ ಸದಸ್ಯರು, ಶಾಸಕರಾದ ಅಶೋಕ್ ಕುಮಾರ್ ರೈ, ಎಂ.ಎಲ್. ಸಿ. ಮಂಜುನಾಥ ಭಂಡಾರಿ, ರಕ್ಷಿತ್ ಶಿವರಾಂ ಬೆಳ್ತಂಗಡಿ, ಇನಾಯತ್ ಅಲಿ, ಶ್ರೀನಿವಾಸ್ ಬಿ.ವಿ., ದೇವಳದ ಆಡಳಿತ ಹಾಗೂ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

15 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

18 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

18 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

19 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

19 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

19 hours ago