Featured

ಮಂಗಳೂರು ದಸರಾ : ಜನಸಾಗರದೊಂದಿಗೆ ವಿಜೃಂಭಣೆಯಿಂದ ನಡೆಯಿತು ವರ್ಣರಂಜಿತ ದಸರಾ ಶೋಭಾಯಾತ್ರೆ -Vishwanews24

ಮಂಗಳೂರು : ಕ್ಷೇತ್ರದ ನವೀಕರಣ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಕುದ್ರೋಳಿ ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.

ಕುದ್ರೋಳಿ ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.

ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಮೆರವಣಿಗೆ ಕಂಬ್ಳ ರಸ್ತೆ, ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್‌ ಸರ್ಕಲ್‌, ಲಾಲ್‌ಬಾಗ್‌, ಬಲ್ಲಾಳ್‌ಬಾಗ್‌, ಪಿ.ವಿ.ಎಸ್‌. ವೃತ್ತ, ಕೆ.ಎಸ್‌. ರಾವ್‌ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ಗಣಪತಿ ಹೈಸ್ಕೂಲ್‌ ಮಾರ್ಗವಾಗಿ ಶ್ರೀ ವೆಂಕಟ ರಮಣ ದೇಗುಲ ಮುಂಭಾಗದಿಂದ ಕಾರ್‌ ಸ್ಟ್ರೀಟ್‌, ಅಳಕೆಯ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು.

ಇದೇ ಮೊದಲ ಬಾರಿಗೆ ನವದುರ್ಗೆಯರ ಸಹಿತ ಶಾರದಾ ಮಾತೆಯ ವಿಗ್ರಹಗಳು ಶೋಭಾಯಾತ್ರೆಯಲ್ಲಿ ಮುಂದೆ ಸಾಗಿದ ಬಳಿಕ ಸ್ತಬ್ಧಚಿತ್ರಗಳು ಅನುಸರಿಸಿದವು. ಕಲಾ ತಂಡಗಳು, 100 ಬಣ್ಣದ ಕೊಡೆಗಳು, ಚೆಂಡೆ ವಾದ್ಯ ಮತ್ತು ವಿವಿಧ ಕಲಾ ಪ್ರಕಾರಗಳು ಹೊಸ ರಂಗು ನೀಡಿದವು. ವಿವಿಧ ಸಂಘ ಸಂಸ್ಥೆಗಳು ಪ್ರವರ್ತಿಸಿದ ಸುಮಾರು 70ಕ್ಕೂ ಅಧಿಕ ಸ್ತಬ್ಧಚಿತ್ರಗಳು ರಂಗು ಹೆಚ್ಚಿಸಿದವು. ದಸರಾ ಮೆರವಣಿಗೆ ಸಾಗಿ ಬಂದ ರಸ್ತೆಯ ಇಕ್ಕೆಲಗಳಲ್ಲಿಯೂ ಜನ ಜಾತ್ರೆ ಮೇಳೈಸಿತ್ತು. ಅಲ್ಲಲ್ಲಿ ಸಂಗೀತ ರಸಮಂಜರಿ ಮತ್ತಿತರ ಕಾರ್ಯಕ್ರಮಗಳು ಮನಸೂರೆಗೊಂಡವು.

ಶೋಭಾಯಾತ್ರೆ ಆರಂಭಕ್ಕೂ ಮುನ್ನ ಕುದ್ರೋಳಿಯ ಶ್ರೀ ಶಾರದೆಯ ಸನ್ನಿಧಿಯಲ್ಲಿ ಹಲವು ಮಂದಿ ಸೇವಾಕರ್ತರನ್ನು ಕ್ಷೇತ್ರಾಡಳಿತ ಮಂಡಳಿಯ ಪರವಾಗಿ ಸಮ್ಮಾನಿಸಲಾಯಿತು. ಶಾಸಕರಾದ ಯು.ಟಿ. ಖಾದರ್‌, ವೇದವ್ಯಾಸ ಕಾಮತ್‌, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಜೆ.ಆರ್‌. ಲೋಬೋ, ಮಾಜಿ ಮೇಯರ್‌ ಎಂ. ಶಶಿಧರ ಹೆಗ್ಡೆ, ಪ್ರಮುಖರಾದ ಜಯ ಸಿ. ಸುವರ್ಣ, ಚಂದ್ರಶೇಖರ್‌, ಎಚ್‌.ಎಸ್‌. ಸಾಯಿರಾಂ, ಪದ್ಮರಾಜ್‌ ಆರ್‌., ಮಾಧವ ಸುವರ್ಣ, ರವಿಶಂಕರ ಮಿಜಾರು, ಹರಿಕೃಷ್ಣ ಬಂಟ್ವಾಳ, ದೀಪಕ್‌ ಪೂಜಾರಿ, ಕಳ್ಳಿಗೆ ತಾರಾನಾಥ ಶೆಟ್ಟಿ ಉಪಸ್ಥಿತರಿದ್ದರು.

 

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

2 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

3 hours ago