ಮಂಗಳೂರು : ಕ್ಷೇತ್ರದ ನವೀಕರಣ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಕುದ್ರೋಳಿ ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.
ಕುದ್ರೋಳಿ ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.
ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಮೆರವಣಿಗೆ ಕಂಬ್ಳ ರಸ್ತೆ, ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ಸರ್ಕಲ್, ಲಾಲ್ಬಾಗ್, ಬಲ್ಲಾಳ್ಬಾಗ್, ಪಿ.ವಿ.ಎಸ್. ವೃತ್ತ, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟ ರಮಣ ದೇಗುಲ ಮುಂಭಾಗದಿಂದ ಕಾರ್ ಸ್ಟ್ರೀಟ್, ಅಳಕೆಯ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು.
ಇದೇ ಮೊದಲ ಬಾರಿಗೆ ನವದುರ್ಗೆಯರ ಸಹಿತ ಶಾರದಾ ಮಾತೆಯ ವಿಗ್ರಹಗಳು ಶೋಭಾಯಾತ್ರೆಯಲ್ಲಿ ಮುಂದೆ ಸಾಗಿದ ಬಳಿಕ ಸ್ತಬ್ಧಚಿತ್ರಗಳು ಅನುಸರಿಸಿದವು. ಕಲಾ ತಂಡಗಳು, 100 ಬಣ್ಣದ ಕೊಡೆಗಳು, ಚೆಂಡೆ ವಾದ್ಯ ಮತ್ತು ವಿವಿಧ ಕಲಾ ಪ್ರಕಾರಗಳು ಹೊಸ ರಂಗು ನೀಡಿದವು. ವಿವಿಧ ಸಂಘ ಸಂಸ್ಥೆಗಳು ಪ್ರವರ್ತಿಸಿದ ಸುಮಾರು 70ಕ್ಕೂ ಅಧಿಕ ಸ್ತಬ್ಧಚಿತ್ರಗಳು ರಂಗು ಹೆಚ್ಚಿಸಿದವು. ದಸರಾ ಮೆರವಣಿಗೆ ಸಾಗಿ ಬಂದ ರಸ್ತೆಯ ಇಕ್ಕೆಲಗಳಲ್ಲಿಯೂ ಜನ ಜಾತ್ರೆ ಮೇಳೈಸಿತ್ತು. ಅಲ್ಲಲ್ಲಿ ಸಂಗೀತ ರಸಮಂಜರಿ ಮತ್ತಿತರ ಕಾರ್ಯಕ್ರಮಗಳು ಮನಸೂರೆಗೊಂಡವು.
ಶೋಭಾಯಾತ್ರೆ ಆರಂಭಕ್ಕೂ ಮುನ್ನ ಕುದ್ರೋಳಿಯ ಶ್ರೀ ಶಾರದೆಯ ಸನ್ನಿಧಿಯಲ್ಲಿ ಹಲವು ಮಂದಿ ಸೇವಾಕರ್ತರನ್ನು ಕ್ಷೇತ್ರಾಡಳಿತ ಮಂಡಳಿಯ ಪರವಾಗಿ ಸಮ್ಮಾನಿಸಲಾಯಿತು. ಶಾಸಕರಾದ ಯು.ಟಿ. ಖಾದರ್, ವೇದವ್ಯಾಸ ಕಾಮತ್, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಜೆ.ಆರ್. ಲೋಬೋ, ಮಾಜಿ ಮೇಯರ್ ಎಂ. ಶಶಿಧರ ಹೆಗ್ಡೆ, ಪ್ರಮುಖರಾದ ಜಯ ಸಿ. ಸುವರ್ಣ, ಚಂದ್ರಶೇಖರ್, ಎಚ್.ಎಸ್. ಸಾಯಿರಾಂ, ಪದ್ಮರಾಜ್ ಆರ್., ಮಾಧವ ಸುವರ್ಣ, ರವಿಶಂಕರ ಮಿಜಾರು, ಹರಿಕೃಷ್ಣ ಬಂಟ್ವಾಳ, ದೀಪಕ್ ಪೂಜಾರಿ, ಕಳ್ಳಿಗೆ ತಾರಾನಾಥ ಶೆಟ್ಟಿ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…